ಧಾರ್ಮಿಕ
ಆನೆಗುಡ್ಡೆ ಶ್ರೀ ವಿನಾಯಕ ದೇವರ ಸನ್ನಿಧಿಯಲ್ಲಿ ದೇಶದ ರಕ್ಷಣೆ ಮತ್ತು ಸುಭಿಕ್ಷೆಗಾಗಿ ವಿಶೇಷ ಪ್ರಾರ್ಥನೆ

Views: 45
ಕನ್ನಡ ಕರಾವಳಿ ಸುದ್ದಿ: ಭಾರತೀಯ ಸೇನಾ ಕಾರ್ಯಾಚರಣೆ ಅಪರೇಷನ್ ಸಿಂಧೂರ ವಿಜಯದ ಸಂಕೇತವಾಗಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಸನ್ನಿಧಿಯಲ್ಲಿ ಇಂದು ಮೇ.10ರಂದು ವಿಶೇಷ ದೀಪಾರಾಧನೆ ಪೂರ್ವಕ ರಂಗಪೂಜೆಯನ್ನು ಊರ ಹಲವು ಗಣ್ಯರು, ರಾಜಕೀಯ ಮುಖಂಡರು,ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು ಸದಸ್ಯರು ಮತ್ತು ಭಕ್ತಾದಿಗಳೊಂದಿಗೆ ಆಡಳಿತ ಮೊಕ್ತೇಸರರು, ಪರ್ಯಾಯ ಅರ್ಚಕರು, ಅರ್ಚಕ. ಸಿಬ್ಬಂದಿಯೊಂದಿಗೆ ವಿಶೇಷ ಪ್ರಾರ್ಥನೆಯೊಂದಿಗೆ ಸೇವೆಯನ್ನು ನೆರವೇರಿಸಲಾಯಿತು.
ವೀರ ಸೈನಿಕರ ಶ್ರೇಯಸ್ಸಿಗಾಗಿ ಪ್ರಾರ್ಥಿಸುತ್ತಾ ದೇಶದ ರಕ್ಷಣೆ ಮತ್ತು ಸುಭಿಕ್ಷೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರದಲ್ಲಿ ಭಕ್ತರಿಗೆ ಪ್ರಸಾದ ವಿತರಣೆ ಮತ್ತು ಮಧ್ಯಾಹ್ನ ಅನ್ನ ಸಂತರ್ಪಣೆಯೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.