ಇತರೆ
ಈಜಲು ತೆರಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

Views: 0
ಹೊನ್ನಾವರ ಪಟ್ಟಣದ ರಾಮತೀರ್ಥಕ್ಕೆ ಈಜಲು ತೆರಳಿದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತಪಟ್ಟ ವಿದ್ಯಾರ್ಥಿ ಮಣಿಕಂಠ ಮಂಜುನಾಥ ನಾಯ್ಕ್ (17) ಎಂದು ತಿಳಿದು ಬಂದಿದೆ.
ನಗರದ ಸರಕಾರಿ ಮೋಹನ್ ಕೆ. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದು ,ಮಳೆಯ ಕಾರಣ ಕಾಲೇಜಿಗೆ ರಜೆ ಇರುವುದರಿಂದ ಈಜಲು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಪ್ರಕರಣ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.






