ಕ್ರೀಡೆ
ಉಜಿರೆ:ಕಾಲೇಜು ಕಬಡ್ಡಿ ಕ್ರೀಡಾಪಟು ಅಸೌಖ್ಯದಿಂದ ಸಾವು

Views: 58
ಉಜಿರೆ : ಅಲ್ಪಕಾಲದ ಅಸೌಖ್ಯದಿಂದ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಗೌಡ ಪಿ.ಕೆ ನಿನ್ನೆ (ನ.12) ನಿಧನರಾಗಿದ್ದಾರೆ.
ಮಂಡ್ಯ ಮೂಲದ ಚಿನ್ಮಯ್ ಗೌಡ, ಹಾಸ್ಟೆಲ್ನಲ್ಲಿ ವಾಸವಿದ್ದು, ಅಲ್ಲಿಂದಲೇ ಕಾಲೇಜಿಗೆ ಹೋಗುತ್ತಿದ್ದರು.
ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದ ಚಿನ್ಮಯ್ , ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ತಂದುಕೊಟ್ಟಿದ್ದರು.
ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಚಿನ್ಮಯ್ ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.