ಉಡುಪಿ: ಬ್ಯಾಂಕು ಮತ್ತು ಸೊಸೈಟಿಗಳಲ್ಲಿ 30 ಗ್ರಾಂ ಗೋಲ್ಡ್ ವಂಚನೆ ನಾಲ್ವರ ಬಂಧನ

Views: 46
ಪಡುಬಿದ್ರಿ: ಬ್ಯಾಂಕು ಮತ್ತು ಸೊಸೈಟಿಗಳಲ್ಲಿ 30 ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಕುಮುಟಾದ ನಿತಿಲ್ ಭಾಸ್ಕರ್ ಶೇಟ್(35), ಸಂಜಯ್ ಶೇಟ್(42), ಸಂತೋಷ್ ಶೇಟ್(39) ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ(26)
ಆರೋಪಿಗಳಿಂದ ನಕಲಿ 916 ಹಾಲ್ಮಾರ್ಕ್ ಸೀಲ್ ಹಾಕಲು ಬಳಸಲಾಗುತ್ತಿದ್ದ ಸುಮಾರು3.5 ಲಕ್ಷ ರೂ. ಮೌಲ್ಯದ ಮೆಷಿನ್, ಕಂಪ್ಯೂಟರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೀಗ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ರಾಜೀವ್ 30 ಗ್ರಾಂ ಗೋಲ್ಡ್ ಬಳಸಿ ಗಲ್ಫ್ ರಾಷ್ಟ್ರಕ್ಕೆ ಹೋಗುವ ಮತ್ತು ಅಲ್ಲಿಂದ ವಾಪಾಸಾಗುವ ವೇಳೆ ಶುದ್ಧ ಚಿನ್ನದಾಭರಣವನ್ನೇ ಹಾಕಿಕೊಂಡು ಬರುವ ತನ್ನ ಪ್ಲಾನ್ಗೆ ಸಹಕರಿಸಲು ಪ್ರಕರಣದ ಇತರ ಆರೋಪಿ ಗೆಳೆಯ ನಿತಿಲ್ ಭಾಸ್ಕರ್ ಶೇಟ್ ನನ್ನು ಬಳಸಿಕೊಂಡಿದ್ದ. ಕುಮುಟಾದ ಇನ್ನಿಬ್ಬರು ಆರೋಪಿಗಳಿಂದ ನಕಲಿ ಚಿನ್ನದ 40 ಬಳೆಗಳನ್ನು ತಯಾರಿಸಿಕೊಟ್ಟಿದ್ದರು. ಬೆಳಗಾವಿಯಲ್ಲಿ ನಕಲಿ ಹಾಲ್ಮಾರ್ಕ್ ಮೊಹರನ್ನು ಹಾಕಲಾಗಿತ್ತು. ಆದರೆ ಆರೋಪಿ ರಾಜೀವ್ ಸ್ಥಳೀಯವಾಗಿ ವಿತ್ತೀಯ ಸಂಸ್ಥೆಗಳಲ್ಲಿ ಅವುಗಳನ್ನು ಅಡವಿಟ್ಟು ವಂಚಿಸಿದ ಆರೋಪದಲ್ಲಿ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
92 ಶೇ. ಚಿನ್ನಾಭರಣಗಳಂತೆಯೇ ಸಾಚಾ ಚಿನ್ನ ಇದೆಂದು ನಂಬಿದ ಬ್ಯಾಂಕು, ಸೊಸೈಟಿಗಳು ಚಿನ್ನಭರಣ ಈಡಿನ ಸಾಲವನ್ನಿತ್ತು ಮರಳಿ ಬಾರದೇ ಇದ್ದಾಗ ಏಲಂ ಪ್ರಕ್ರಿಯೆ ನಡೆಸಿ ಇದರಲ್ಲೂ ನಕಲಿ – ಅಸಲಿಗಳನ್ನು ಪತ್ತೆ ಮಾಡಲಾಗಿರಲಿಲ್ಲ. ಕೇವಲ ಉಡುಪಿಯ ಬಿಡ್ಡುದಾರರೊಬ್ಬರು ಇದನ್ನು ಕತ್ತರಿಸಿ ಪರಿಶೀಲಿಸಿದಾಗ ಆರೋಪಿ ರಾಜೀವ್ ಮತ್ತಾತನ ಪತ್ನಿಯ ಚಿನ್ನಾಭರಣ ಸಾಲದ ಇಡಿಯ ಪ್ರಕರಣವು ಹೊರಬಂದಿತ್ತು.