ಇತರೆ

ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ, ಮಹಿಳೆ ರಕ್ಷಣೆ, ಓರ್ವ ಬಂಧನ

Views: 184

ಕನ್ನಡ ಕರಾವಳಿ ಸುದ್ದಿ: ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಶಾರದ ನಗರದಲ್ಲಿರುವ ‘ಧರಿತ್ರಿ’ ಎಂಬ ಮನೆಯಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಉಡುಪಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಓರ್ವ ಸಂತ್ರಸ್ತೆಯನ್ನು ರಕ್ಷಿಸಲಾಯಿತು. ಸತೀಶ್ ಎಂಬ ವ್ಯಕ್ತಿ ಸಂತ್ರಸ್ತೆಗೆ ಕೆಲಸ ಕೊಡಿಸುವ ನೆಪದಲ್ಲಿ ಮೂಡಬಿದ್ರೆಯಿಂದ ಉಡುಪಿಯ ಶಾರದ ನಗರದಲ್ಲಿರುವ ಶ್ರೀಲತಾ ಎಂಬಾಕೆಯ ಮನೆಗೆ ಕಳುಹಿಸಿದ್ದ. ಅಲ್ಲಿ ಶ್ರೀಲತಾ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿ, ಒಂದು ಕೋಣೆಯಲ್ಲಿ ಕೂಡಿ ಹಾಕಿದ್ದಳು ಎಂದು ತಿಳಿದುಬಂದಿದೆ. ಆರೋಪಿಗಳು ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಿ ಹಣ ಸಂಪಾದಿಸುವ ಉದ್ದೇಶದಿಂದ ಆಕೆಯನ್ನು ಒತ್ತಾಯ ಪೂರ್ವಕವಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!