ಶಿಕ್ಷಣ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲಾಗುವ ಭಯದಿಂದ ಆತ್ಮಹತ್ಯೆಗೆ ಶರಣಾದ ಬಾಲಕಿ

Views: 236
ಕನ್ನಡ ಕರಾವಳಿ ಸುದ್ದಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿ ಫೇಲಾಗುವ ಭಯದಿಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲನಿಯಲ್ಲಿ ನಡೆದಿದೆ.
ದೀಪಿಕಾ ರಾಜೇಂದ್ರ ಬಡಿಗೇರ (16) ಮೃತ ದುರ್ದೈವಿ. ನಿನ್ನೆ ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಪರೀಕ್ಷೆಯಲ್ಲಿ ಫೇಲಾಗುವ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ದೀಪಿಕಾ ಎರಡನೇ ವಿಷಯದ ಪರೀಕ್ಷೆ ಬರೆದು ಬಂದಿದ್ದಳು. ಆದರೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಂಜೆ ಕುಟುಂಬಸ್ಥರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು.ಇನ್ನು ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.