ಸಾಂಸ್ಕೃತಿಕ
ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ; ಕಾಂತಾರ 2 ಬಿಡುಗಡೆಗೆ ಸುಳಿವು!

Views: 125
ಕನ್ನಡ ಕರಾವಳಿ ಸುದ್ದಿ: ರಿಷಬ್ ಶೆಟ್ಟಿ, ಪತ್ನಿ, ಮಕ್ಕಳೊಂದಿಗೆ ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಿಗೆ ಸೀರೆ ಅರ್ಪಿಸಿ, ಪೂಜೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಿಷಬ್, ಕಾಂತಾರ 2 ಚಿತ್ರೀಕರಣ ಕೊನೆಯ ಹಂತದಲ್ಲಿದೆ. ಕುಟುಂಬ ಸಮೇತರಾಗಿ ಟೆಂಪಲ್ ರನ್ ಮಾಡುತ್ತಿದ್ದೇನೆ. ಅಕ್ಟೋಬರ್ 2 ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಯೋಚನೆ ಮಾಡಲಾಗಿದೆ ಎಂದರು.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಡಿಕೆಶಿ ವಾರ್ನಿಂಗ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾನು ಚಿತ್ರದ ಶೂಟಿಂಗ್ ನಲ್ಲಿದ್ದೇನೆ. ಆ ಬಗ್ಗೆ ಗೊತ್ತಿಲ್ಲ ಎಂದರು. ಈ ಸಂದರ್ಭ ಅನಂತ ಪದ್ಮನಾಭ ಅಸ್ರಣ್ಣ, ಸದಾನಂದ ಅಸ್ರಣ್ಣ, ಶ್ರೀಕರ ಅಸ್ರಣ್ಣ ಇನ್ನಿತರರು ಉಪಸ್ಥಿತರಿದ್ದರು.