ಜನಮನ

ಕರ್ನಾಟಕದ ಮತ್ತೋರ್ವ ಯೋಧ ವೀರಮರಣ 

Views: 166

ಕನ್ನಡ ಕರಾವಳಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲ್ಲೂಕಿನ ನಿಂಗೆನಟ್ಟಿ ಗ್ರಾಮದ ನಿವಾಸಿ ರವಿ ತಳವಾರ ವೀರಮರಣ ಹೊಂದಿದ್ದಾರೆ.

ನಾಗಾಲ್ಯಾಂಡ್‌ನ ಅಸ್ಸಾಂ ರೈಫಲ್ಸ್‌ನ 41 ಬೆಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಬೆಳಗಾವಿ ತಾಲ್ಲೂಕಿನ ನಿಂಗೆನಟ್ಟಿ ಗ್ರಾಮದ ಸೈನಿಕ ಬುಧವಾರ ಬೆಳಗ್ಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ರವಿ ತಳವಾರ ಪ್ರಯಾಣಿಸುತ್ತಿದ್ದ ವಾಹನವು ನಾಗಾಲ್ಯಾಂಡ್‌ನ ಘಾಟ್ ವಿಭಾಗದಲ್ಲಿ ಆಳವಾದ ಕಂದಕಕ್ಕೆ ಬಿದ್ದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ಬೆಳಿಗ್ಗೆ ರಕ್ಷಣಾ ಅಧಿಕಾರಿಗಳಿಂದ ಮಾಹಿತಿ ಸಿಕ್ಕಿದೆ ಎಂದು ತಿಳಿಸಿದ್ದಾರೆ.

16 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ರವಿ, ಇನ್ನೆರಡು ವರ್ಷಗಳಲ್ಲಿ ನಿವೃತ್ತರಾಗುವ ನಿರೀಕ್ಷೆಯಿತ್ತು. ಮೃತ ಸೈನಿಕನಿಗೆ ಪತ್ನಿ ಶೀತಲ್ ತಳವಾರ, 11 ವರ್ಷದ ಮಗಳು ಮತ್ತು 10 ವರ್ಷದ ಮಗ ಇದ್ದಾರೆ. ರವಿ ಅವರ ಮೃತದೇಹ ಎರಡು ದಿನಗಳಲ್ಲಿ ಮನೆಗೆ ತಲುಪುವ ನಿರೀಕ್ಷೆಯಿದೆ.

Related Articles

Back to top button