ಶಿಕ್ಷಣ
ಕುಂದಾಪುರ:ಕೋಡಿ ಕಡಲ ತೀರದ ಸ್ವಚ್ಛತೆ,ಕಡಲಾಮೆಗಳ ಸಂರಕ್ಷಣೆ ಜಾಗೃತಿಗಾಗಿ ಬೀದಿನಾಟಕ

Views: 117
ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೇಚರ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎಚ್ಸಿಎಲ್ ಫೌಂಡೇಶನ್, ರೀಫ್ ವಾಚ್ ಹಾಗೂ ಅರಣ್ಯ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕೋಡಿ ಕಡಲತೀರದ ಸ್ವಚ್ಛತೆ ಮತ್ತು ಕಡಲಾಮೆಗಳ ಸಂರಕ್ಷಣೆ ಜಾಗೃತಿಗಾಗಿ ಬೀದಿನಾಟಕ ಪ್ರದರ್ಶನ ನಡೆಯಿತು.
ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ, ಬೈಕಾಡಿ ಅಳಿವಿನಂಚಿನಲ್ಲಿರುವ ಕಡಲಾಮೆಗಳ ಸಂರಕ್ಷಣೆಯಿಂದ ಪರಿಸರಕ್ಕಾಗುವ ಅನುಕೂಲತೆಗಳ ಜಾಗೃತಿ ಮೂಡಿಸುವ ಬೀದಿನಾಟಕ ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ರೀಫ್ ವಾಚ್ ಸಂಸ್ಥೆಯ ಔಟ್ರೀಚ್ ಆಫೀಸರ್ ವೆಂಕಟೇಶ್ ಶೇರೆಗಾರ್, ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ, ದೀಪಾ ಪೂಜಾರಿ, ನೇಚರ್ ಕ್ಲಬ್ನ ಸಂಯೋಜಕರಾದ ಸುಧೀರ್ ಕುಮಾರ್, ಸತೀಶ್ ಕಾಂಚನ್, ಶ್ವೇತಾ ಭಂಡಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. 100ಕ್ಕೂ ಹೆಚ್ಚು ಸ್ವಯಂಸೇವಕರು ಸ್ವಚ್ಛತೆಯಲ್ಲಿ ಭಾಗವಹಿಸಿದರು.