ಕರಾವಳಿ

ಕುಂದಾಪುರ:ಹಂಗಳೂರಿನಲ್ಲಿ ಹಾಡಹಗಲೇ ಚಿನ್ನಾಭರಣ,ನಗದು ಕಳ್ಳತನ 

Views: 315

ಕುಂದಾಪುರ ಇಲ್ಲಿಗೆ ಸಮೀಪ ಹಂಗಳೂರು ಬ್ರಹ್ಮ ದೇವಸ್ಥಾನ ರಸ್ತೆಯ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಸಹಿತ ಪರಾರಿಯಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಬ್ರಹ್ಮ ದೇವಸ್ಥಾನ ರಸ್ತೆಯ ನಿವಾಸಿ ಜಗದೀಶ್ ಚಂದ್ರ ನಾಯರ್ ಎಂಬುವವರ ಮನೆಯಲ್ಲಿ ಹಗಲಿನಲ್ಲಿಯೇ ನಡೆದ ಕಳ್ಳತನಕ್ಕೆ ಇಲ್ಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಜಗದೀಶ್ ರಾವ್ ಅವರು ಕೆಲಸ ಮುಗಿಸಿಕೊಂಡು ಮಧ್ಯಾಹ್ನ ಊಟ ಮಾಡಿ ತಮ್ಮ ಕೆಲಸಕ್ಕೆ ತೆರಳಿದ್ದರು. ಸುಮಾರು 4 ಗಂಟೆಗೆ ಜಗದೀಶ್ ಪತ್ನಿ ಮಗಳನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Back to top button