ಇತರೆ
ಕುಂದಾಪುರ: ಕೋಣಿಯಲ್ಲಿ ಬ್ಯಾಂಕ್ ಕಳ್ಳತನಕ್ಕೆ ಯತ್ನಿಸಿದ್ದ ಕಳ್ಳರಿಬ್ಬರ ಬಂಧನ

Views: 217
ಕುಂದಾಪುರ: ಇಲ್ಲಿಗೆ ಸಮೀಪ ಕೋಣಿ ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿ ನ.16ರಂದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಇಂದ್ರನಗರ ನಿವಾಸಿ ಮೊಹಮ್ಮದ್ ಹುಸೇನ್(22) ಹಾಗೂ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕಳ್ಳತನಕ್ಕೆ ಬಳಸಿದ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಅಕ್ಟೋಬರ್ 16ರ ಮಧ್ಯರಾತ್ರಿಯಲ್ಲಿ ಕೋಣೆ ಕರ್ಣಾಟಕ ಬ್ಯಾಂಕಿನ ಎಟಿಎಂಗೆ ನುಗ್ಗಿ ಯಂತ್ರ ತೆರೆಯಲು ಯತ್ನಿಸುತ್ತಿರುವಾಗ ಸೆಕ್ಯೂರಿಟಿ ಸಂಸ್ಥೆಯವರು ಎಚ್ಚರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು ಅಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದಾರೆ.
ಎಟಿಎಂ ನಿರ್ವಹಿಸುವ ಸಂಸ್ಥೆಯ ಭದ್ರತಾ ನಿಗಾ ವಹಿಸುವವರು ಹೈದರಾಬಾದಿನಲ್ಲಿ ಸಿಸಿಟಿವಿ ಮಾನಿಟರಿಂಗ್ ಮಾಡುತ್ತಿದ್ದು, ಅವರ ಗಮನಕ್ಕೆ ಬಂದ ತತ್ ಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ರಾತ್ರಿಯಲ್ಲಿ ಗಸ್ತು ತಿರುಗುತ್ತಿರುವಾಗ ಕಳ್ಳರು ಪರಾಗಿಯಾಗಿದ್ದಾರೆ.