ಕರಾವಳಿ
ಕುಂದಾಪುರ: ಡ್ರೈವಿಂಗ್ ವೇಳೆ ಹೃದಯಾಘಾತದಿಂದ ಲಾರಿ ಚಾಲಕ ಸಾವು

Views: 212
ಕನ್ನಡ ಕರಾವಳಿ ಸುದ್ದಿ: ಇಲ್ಲಿಗೆ ಸಮೀಪ ಅಂಪಾರು ಗ್ರಾಮದ ನೆಲ್ಲಿಕಟ್ಟೆ ಬಳಿ ಡ್ರೈವಿಂಗ್ ಮಾಡುತ್ತಿರುವಾಗ ಹೃದಯಾಘಾತದಿಂದ ಲಾರಿ ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಲಾರಿ ಚಾಲಕ ವಿಶಾಂತ್(29) ಅವರು ಮೃತಪಟ್ಟ ದುದೈವಿ
ಮಂಗಳೂರಿನ ಇರ್ಪಾನ್ ಎಂಬುವವರ ಮಾಲಿಕತ್ವದ ಲಾರಿ ಆಗಿದ್ದು, ಮಂಗಳೂರಿನಿಂದ ಕಲ್ಲಿದ್ದಲು ತುಂಬಿಸಿಕೊಂಡು, ಬಳ್ಳಾರಿಗೆ ಹೋಗುತ್ತಿದ್ದ ಲಾರಿಯನ್ನು ವಿಶಾಂತ್ ಅವರು ಚಲಾಯಿಸುತ್ತಿದ್ದು, ಅಂಪಾರು ಗ್ರಾಮದ ನೆಲ್ಲಿಕಟ್ಟೆ ಬಳಿ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೆ 108 ವಾಹನದ ಮೂಲಕ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಸಹೋದರ ನವಿನ್ ಪೊಲೀಸರಿಗೆ ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.