ಕರಾವಳಿ

ಕುಂದಾಪುರ: ಬೀಜಾಡಿ ಮಿನಿ-ಕೈರಂಪಣಿ ದೋಣಿ ಮಗುಚಿ ಮೀನುಗಾರ ಸಾವು 

Views: 360

ಕುಂದಾಪುರ: ಕೋಟೇಶ್ವರ ಸಮೀಪ ಬೀಡಾಡಿ ಎಂಬಲ್ಲಿ ಮಿನಿ-ಕೈರಂಪಣಿ ದೊಣಿಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ದೋಣಿ ಮುಗುಚಿ ಮೀನುಗಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತರನ್ನು ಬೀಜಾಡಿ ಗ್ರಾಮದ ಸಂಜೀವ(58) ಎಂದು ಗುರುತಿಸಲಾಗಿದೆ. ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇಂದು ಬೆಳಿಗ್ಗೆ ಬೀಜಾಡಿ ಗ್ರಾಮದ ಚಾತ್ರಬೆಟ್ಟು ಎಂಬಲ್ಲಿ ಸಮುದ್ರದಲ್ಲಿ ಮಿನಿ-ಕೈರಂಪಣಿ ದೊಣಿಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಸಮುದ್ರದ ನೀರಿನ ರಭಸಕ್ಕೆ ದೊಣಿ ಮಗುಚಿ  ಮೀನುಗಾರಿಕೆ ಮಾಡುತ್ತಿದ್ದ ಸಂಜೀವ ಅವರು ಸಮುದ್ರದ ನೀರಿಗೆ ಬಿದ್ದು ಮುಳುಗಿದ್ದು ಅವರನ್ನು ಜೊತೆಯಲ್ಲಿರುವವರು ಮೇಲಕ್ಕೆ ಎತ್ತಿ ಕೋಟೇಶ್ವರ ಎನ್‌ಆರ್ ಆಚಾರ್ಯ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ವೈದ್ಯರು ಪರೀಕ್ಷಿಸಿದಾಗ  ಸಂಜೀವ ಅವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಪ್ರಕರಣ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Related Articles

Back to top button