ಇತರೆ
ಕುಂದಾಪುರ: ಮಾರಣಕಟ್ಟೆಯಲ್ಲಿ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ಸಾವು

Views: 161
ಕುಂದಾಪುರ: ಕೊಲ್ಲೂರು ಮಾರಣಕಟ್ಟೆಯಲ್ಲಿ ವ್ಯಕ್ತಿಯೊಬ್ಬರ ತೋಟದಿಂದ ತೆಂಗಿನಕಾಯಿ ಕೊಯ್ಯುತ್ತಿದ್ದ ಚಿತ್ತೂರು ಗ್ರಾಮದ ರಾಜೇಶ್ (47) ಅವರು ಆಯತಪ್ಪಿ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಜುಲೈ 6ರಂದು ಮೃತಪಟ್ಟಿರುತ್ತಾರೆ.
ಗಂಭೀರ ಗಾಯಗೊಂಡಿದ್ದ ಅವರಿಗೆ ಕುಂದಾಪುರ ಹಾಗೂ ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.