ರಾಜಕೀಯ

ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕುಂದಾಪುರದ ಜಯಪ್ರಕಾಶ್ ಹೆಗ್ಡೆ, ಸುಕುಮಾರ ಶೆಟ್ಟಿ ಬಿಜೆಪಿ ತೊರೆದು ಕಾಂಗ್ರೆಸ್​​ ಸೇರ್ಪಡೆ

Views: 178

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ ಹಾಗೂ ಎಂ.ಪಿ ಕುಮಾರಸ್ವಾಮಿ ಅವರು ಬಿಜೆಪಿ ತೊರೆದು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ ಜಯಪ್ರಕಾಶ್ ಹೆಗ್ಡೆ ಅವರನ್ನ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈ ಹಿಂದೆ 2009 ಮತ್ತು 2014ರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋಲುಂಡಿದ್ದರು. ಸದಾನಂದ ಗೌಡ ಅವರು ಈ ಸಂದರ್ಭದಲ್ಲಿ ರಾಜೀನಾಮೆ ನೀಡಿದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಹೆಗ್ಡೆ ಕಾಂಗ್ರೆಸ್​​ನಿಂದ ಗೆಲುವು ಸಾಧಿಸಿದ್ದರು. ನಂತರ ಬಿಜೆಪಿಗೆ ಸೇರಿದ್ದ ಅವರನ್ನು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಸದ್ಯ ಜಯಪ್ರಕಾಶ್ ಹೆಗ್ಡೆ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧೆ ಮಾಡಲಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಜೊತೆ ಬಿಜೆಪಿಯ ಇನ್ನಿಬ್ಬರು ಮಾಜಿ ಶಾಸಕರಾದ ಬಿ.ಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಕಾಂಗ್ರೆಸ್ ಸೇರಿದರು. ಪಕ್ಷದ ಶಾಲು ಹಾಕಿ, ಕಾಂಗ್ರೆಸ್​ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ವೇಳೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೆ.ಜೆ ಜಾರ್ಜ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಕಾಂಗ್ರೆಸ್​ನ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

 

Related Articles

Back to top button