ರಾಜಕೀಯ

ತಿಹಾರ್ ಜೈಲು ಪಾಲಾದ ಕೇಜ್ರಿವಾಲ್..ಏ.15 ರವರೆಗೆ ನ್ಯಾಯಾಂಗ ಬಂಧನ

Views: 97

ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ಇಡಿ ವಿಶೇಷ ಕೋರ್ಟ್​ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸದ್ಯ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ.

ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಸಿಎಂ ಕೇಜ್ರಿವಾಲ್​ರನ್ನು ಅರೆಸ್ಟ್ ಮಾಡಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 1ಕ್ಕೆ ಅವರ ಕಸ್ಟಡಿಯ ಅವಧಿ ಮುಗಿದ ಕಾರಣ ಮತ್ತೆ ಕೇಜ್ರಿವಾಲ್​ರನ್ನು ಕೋರ್ಟ್​ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್​ ವಿಚಾರಣೆ ವೇಳೆ ಇನ್ನು 15 ದಿನ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ಇಡಿ ಮನವಿ ಮಾಡಿತ್ತು. ಇಡಿಯ ಮನವಿಯಂತೆ ಮತ್ತೆ ಏಪ್ರಿಲ್​ 15ರವರೆಗೆ ಸಿಎಂ ಕೇಜ್ರಿವಾಲ್​ರನ್ನ ಬಂಧನಕ್ಕೆ ಒಪ್ಪಿಸಲಾಗಿದೆ.

ಇಡಿ ಅಧಿಕಾರಿಗಳು ವಿಚಾರಣೆ ವೇಳೆ ಪ್ರತಿ ಪ್ರಶ್ನೆಗೂ ‘ನನಗೆ ಏನು ಗೊತ್ತಿಲ್ಲ’ ಎಂದು ಸಿಎಂ ಜೇಜ್ರಿವಾಲ್​ ಉತ್ತರ ನೀಡುತ್ತಿದ್ದಾರೆ. ಇದರಿಂದ ಸಿಎಂ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೋರ್ಟ್​ ಮುಂದೆ ಇಡಿ ಹೇಳಿದೆ.

Related Articles

Back to top button