ಇತರೆ

ಧರ್ಮಸ್ಥಳದಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ಪೊಲೀಸ್ ಠಾಣೆ ಎಂದು ಘೋಷಿಸಿದ ಸರ್ಕಾರ

Views: 167

ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳದಲ್ಲಿ ಮಹಿಳೆಯರು, ಯುವತಿಯರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ)ವನ್ನು ರಚನೆ ಮಾಡಿತ್ತು. ಸದ್ಯ ಇದೀಗ ಈ ಎಸ್ಐಟಿಯನ್ನು ಪೊಲೀಸ್ ಠಾಣೆ ಎಂದು ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪದಡಿ ತನಿಖೆಗೆ ರಚನೆಯಾಗಿದ್ದ ಎಸ್ಐಟಿಗೆ ಪೊಲೀಸ್ ಠಾಣೆ ಮಾನ್ಯತೆಯನ್ನ ಸರ್ಕಾರ ನೀಡಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಕಲಂ 2 (1)(ಯು) ಅಡಿಯಲ್ಲಿ ನೀಡಿರುವ ಅಧಿಕಾರವನ್ನು ಚಲಾಯಿಸಿದ ಸರ್ಕಾರದ ಆದೇಶದಂತೆ 2025 ಜುಲೈ 19 ರಂದು ರಚನೆ ಮಾಡಲಾದ ಎಸ್ಐಟಿಯನ್ನು ಪೊಲೀಸ್ ಠಾಣೆ ಎಂದು ಅನೌನ್ಸ್ ಮಾಡಲಾಗಿದೆ.

ಎಸ್ಐಟಿಗೆ ನೇಮಕ ಮಾಡಲಾದ ಪೊಲೀಸ್ ನಿರೀಕ್ಷಕರ ದರ್ಜೆಯ/ಮೇಲ್ಪಟ್ಟ ದರ್ಜೆಯ ಅಧಿಕಾರಿಯನ್ನು ಬಿಎನ್ಎಸ್ಎಸ್ ಅಡಿ ಠಾಣಾ ಅಧಿಕಾರಿ ಎಂದು ಘೋಷಣೆ ಮಾಡಲಾಗಿದೆ. ಎಸ್ಐಟಿ ಬಿಎನ್ಎಸ್ಎಸ್ ಅಡಿ ತನಿಖಾ ಕ್ರಮಗಳನ್ನು ಅನುಸರಿಸಿ ರಚಿಸಿರುವ ಸಂಬಂಧಪಟ್ಟ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಕೆ ಮಾಡುವಂತಹ ಅಧಿಕಾರವನ್ನು ಸರ್ಕಾರ ನೀಡಿದೆ

 

Related Articles

Back to top button
error: Content is protected !!