ಸಾಂಸ್ಕೃತಿಕ

ನಟ ದರ್ಶನ್‌ಗೆ ಜಾಮೀನು..ಮನೆ ದೇವರ ಮೊರೆ ಹೋದ ರೇಣುಕಾಸ್ವಾಮಿ ಕುಟುಂಬ!

Views: 285

ಬೆಂಗಳೂರು: ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನು ನೋವಿನ ಸಮಸ್ಯೆಗೆ ತುರ್ತು ಚಿಕಿತ್ಸೆಯ ಅಗತ್ಯ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಇತ್ತ ಮಧ್ಯಂತರ ಜಾಮೀನು ಸಿಕ್ಕಿದ್ದು, ಅತ್ತ ರೇಣುಕಾಸ್ವಾಮಿ ಕುಟುಂಬಸ್ಥರು ಮನೆ ದೇವರ ಮೊರೆ ಹೋಗಿದ್ದಾರೆ. ಕುರುವತ್ತಿ ಬಸವೇಶ್ವರ ದೇವಸ್ಥಾನಕ್ಕೆ ತೆರಳಿದ್ದಾರೆ.

ಮಗ ರೇಣುಕಾಸ್ವಾಮಿ ಕೊಲೆ ಕೇಸ್ನಿಂದ ನೊಂದಿದ್ದ ಕುಟುಂಬ ಮನಶಾಂತಿಗಾಗಿ ಹಾವೇರಿ ಜಿಲ್ಲೆಯ ಕುರುವತ್ತಿ ಬಸವೇಶ್ವರ ದೇವಾಲಯಕ್ಕೆ ತೆರಳಿದ್ದಾರೆ. ತಂದೆ ಶಿವನಗೌಡರ್, ತಾಯಿ ರತ್ನಪ್ರಭ, ಮಗಳು ಸುಚೇತ ಅವರು ದೇವರ ದರ್ಶನಕ್ಕೆ ಹೋಗಿದ್ದಾರೆ.

ರೇಣುಕಾಸ್ವಾಮಿ ಕೊಲೆಯ ಬಳಿಕ 6 ತಿಂಗಳಿಂದ ಕುಟುಂಬ ನೊಂದಿತ್ತು. ಇದ್ದ ಒಬ್ಬ ಮಗನನ್ನು ಹಂತಕರು ಕೊಲೆ ಮಾಡಿದ್ದು, ಇದರಿಂದ ಆಘಾತಕ್ಕೆ ಒಳಗಾಗಿತ್ತು. ಆದರಿಂದು ದರ್ಶನ್ಗೆ ಮಧ್ಯಂತರ ಜಾಮೀನಿನ ತೀರ್ಪಿನ ಸಮಯದಲ್ಲಿ ಮಾನಸಿಕ ನೆಮ್ಮದಿಗಾಗಿ ರೇಣುಕಾಸ್ವಾಮಿ ಕುಟುಂಬ ಮನೆ ದೇವರ ದರ್ಶನಕ್ಕೆ ತೆರಳಿದೆ.

 

 

 

Related Articles

Back to top button