ಇತರೆ

ನರ್ಸ್ ಮೇಲೆ ಬಿದ್ದ ಕೇಬಲ್ ವೈರ್; ಸ್ಥಳದಲ್ಲೇ ಮಹಿಳೆ ದಾರುಣ ಸಾವು!

Views: 174

ತುಮಕೂರು: ಬೈಕ್​ನಲ್ಲಿ ಹೋಗುತ್ತಿದ್ದಾಗ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ನರ್ಸ್​ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36) ಮೃತಪಟ್ಟ ಯುವತಿ

ಮೃತ ನರ್ಸ್​ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟೆ ಮೂಲದ ನಿವಾಸಿ. ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ರು. ಹೀಗಾಗಿ ಲಕ್ಷ್ಮೀಬಾಯಿ ಕುಣಿಗಲ್ ಪಟ್ಟಣದಲ್ಲಿ ವಾಸವಿದ್ದರು. ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್​ನಲ್ಲಿ ಹಾದುಹೋಗುತ್ತಿದ್ದಾಗ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ.

ಕೇಬಲ್ ವೈರ್ ಮೇಲೆ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಬೈಕ್ ಸವಾರ ಲಕ್ಷ್ಮಣ್​ ಎಂಬುವವರಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮೃತ ಲಕ್ಷ್ಮೀಬಾಯಿಗೆ ಇತ್ತೀಚೆಗೆ ಮದುವೆ ನಿಶ್ಚಯವಾಗಿತ್ತಂತೆ. ಆದರೆ ಯಮನ ರೂಪದಲ್ಲಿ ಬಂದ ಕೇಬಲ್ ವೈರ್​ನಿಂದ ಲಕ್ಷ್ಮೀಬಾಯಿ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Back to top button