ಪತಂಜಲಿ ಉತ್ಪನ್ನಗಳಲ್ಲಿ ಔಷಧೀಯ ಗುಣ ಇರುವ ಸುಳ್ಳು ಜಾಹೀರಾತು: ಯೋಗ ಗುರು ಬಾಬಾ ರಾಮ್ದೇವ್ಗೆ ಸುಪ್ರೀಂ ಕೋರ್ಟ್ ಫುಲ್ ಗರಂ!

Views: 39
ಪತಂಜಲಿ ಉತ್ಪನ್ನಗಳಲ್ಲಿ ಔಷಧೀಯ ಗುಣ ಇರುವ ಬಗ್ಗೆ ತಪ್ಪು ದಾರಿಗೆಳೆಯುವ ಜಾಹೀರಾತು ಪ್ರಸಾರ ಮಾಡಲಾಗುತ್ತಿದೆ, ಇದರ ವಿರುದ್ಧ ಕ್ರಮ ಕೈಗೊಳ್ಳಲು ಭಾರತೀಯ ವೈದ್ಯಕೀಯ ಸಂಘ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸುಳ್ಳು, ತಪ್ಪು ದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದ್ದಕ್ಕೆ ಗರಂ ಆಗಿತ್ತು. ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಬಾಬಾ ರಾಮ್ದೇವ್ ಹಾಗೂ ಆಚಾರ್ಯ ಬಾಲಕೃಷ್ಣಗೆ ನ್ಯಾಯಾಂಗ ನಿಂದನೆ ನೋಟೀಸ್ ಕೂಡ ಜಾರಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ಗೆ ಹಾಜರಾಗಿದ್ದ ಬಾಬಾ ರಾಮ್ದೇವ್ ಅವರು ನ್ಯಾಯಾಲಯಕ್ಕೆ ಕ್ಷಮೆಯಾಚಿಸಿದ್ದಾರೆ. ಬೇಷರತ್ ಕ್ಷಮೆಯಾಚಿಸಿದರೂ ಒಪ್ಪದ ಸರ್ವೋಚ್ಛ ನ್ಯಾಯಾಲಯ ರಾಮ್ದೇವ್ ಅವರನ್ನು ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡಿದೆ. ದೇಶ ಸೇವೆಯ ನೆಪ ಕೊಡಬೇಡಿ ಎಂದು ಕೋರ್ಟ್ ಗರಂ ಆಗಿದೆ.
ಪಂತಂಜಲಿ ಉತ್ಪನ್ನಗಳು ಸುಳ್ಳು ಸುದ್ದಿ ಮೂಲಕ ಸದ್ದು ಮಾಡಿದರು. ಕೇಂದ್ರ ಸರ್ಕಾರ ಮಾತ್ರ ಈ ಬಗ್ಗೆ ಕಣ್ಣು ಮುಚ್ಚಿಕೊಂಡಿರೋದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಮುಂದಿನ ಕ್ರಮ ಎದುರಿಸಲು ಸಿದ್ಧರಾಗಿರಿ ಎಂದು ಸುಪ್ರೀಂಕೋರ್ಟ್ ಬಾಬಾ ರಾಮ್ ದೇವ್ಗೆ ಖಡಕ್ ಎಚ್ಚರಿಕೆ ನೀಡಿದೆ.
ಪತಂಜಲಿ ಉತ್ಪನ್ನಗಳ ಜಾಹೀರಾತಿನಲ್ಲಿ ತಪ್ಪು ಹಾಗೂ ಸುಳ್ಳು ಮಾಹಿತಿಯ ಜಾಹೀರಾತು ನೀಡಿ ಸದ್ಯ ಮಾಡಿದುಣ್ಣೋ ಮಾರಾಯ ಅಂತ ಬಾಬಾ ರಾಮದೇವ್ ಕೋರ್ಟ್ ಕಟಕಟೆಯಲ್ಲಿ ನಿಲ್ಲುವಂತಾಗಿದೆ.. ಕೇಸ್ ಸಂಬಂಧ ಏಪ್ರಿಲ್ 10ಕ್ಕೆ ವಿಚಾರಣೆ ನಡೆಸಲು ಸುಪ್ರೀಂ ತೀರ್ಮಾನಿಸಿದ್ದು ಪತಂಜಲಿ ಕಂಪನಿಯ ತಪ್ಪಿಗೆ ಯಾವ ಶಿಕ್ಷೆ ನೀಡಲಿದೆ ಅನ್ನೋದನ್ನು ಕಾದು ನೋಡಬೇಕಿದೆ.