ಕ್ರೀಡೆ
ಪತ್ನಿ ಬಿಟ್ಟು ಹೋದ ಹಿನ್ನೆಲೆ ನೇಣಿಗೆ ಶರಣಾದ ನ್ಯಾಷನಲ್ ಕಬಡ್ಡಿ ಆಟಗಾರ

Views: 153
ಚಿಕ್ಕಮಗಳೂರು: ನ್ಯಾಷನಲ್ ಕಬಡ್ಡಿ ಆಟಗಾರ ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು ಹೊರವಲಯದಲ್ಲಿ ತೇಗೂರಿನಲ್ಲಿ ನಡೆದಿದೆ. ಪತ್ನಿ ಬಿಟ್ಟ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ವಿನೋದ್ ರಾಜ್ ಅರಸ್ ಮದುವೆಯಾಗಿದ್ದರು. ಆದರೆ 2 ತಿಂಗಳು ಪೂರ್ಣಗೊಳ್ಳುವ ಮೊದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶುಕ್ರವಾರದಂದು ವಿನೋದ್ ರಾಜ್ ಅರಸ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ನಿನ್ನೆ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ವಿನೋದ್ ರಾಜ್ ಅರಸ್ ಸಾವನ್ನಪ್ಪಿದ್ದಾರೆ.
ವಿನೋದ್ ಡಿ.10 ರಂದು ಮದುವೆಯಾಗಿದ್ದರು. ಆದರೆ ಡಿ.31 ಕ್ಕೆ ಪತಿ ಬೇಡ ಎಂದು ಪತ್ನಿ ಬಿಟ್ಟು ಹೋಗಿದ್ದಾಳೆ. ಎರಡು ವರ್ಷ ಪ್ರೀತಿಸಿ ಮದುವೆಯಾಗಿದ್ದ ವಿನೋದ್ನನ್ನು ತೊರೆದಿದ್ದಾಳೆ. ಈ ಸಂಬಂಧ ಇವರಿಬ್ಬರ ಪ್ರೇಮ ವಿವಾಹ ಮಹಿಳಾ ಪೊಲೀಸ್ ಠಾಣಾ ಮೆಟ್ಟೀಲೇರಿತ್ತು. ಆದರೆ ಪತ್ನಿ ಬಿಟ್ಟು ಹೋದ ಹಿನ್ನೆಲೆ ವಿನೋದ್ ರಾಜ್ ಅರಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.