ಬಸ್ರೂರು ಶ್ರೀ ಶಾರದಾ ಕಾಲೇಜು: ಶಿಕ್ಷಕ- ರಕ್ಷಕ ಸಂಘದ ಕಾರ್ಯಕ್ರಮ

Views: 168
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷ 2024-25 ನೇ ಸಾಲಿನ ವಿದ್ಯಾರ್ಥಿಗಳಿಗೆ ವಿವಿಧ ದಾನಿಗಳಿಂದ ನೀಡಿರುವ ವಿದ್ಯಾರ್ಥಿ ವೇತನವನ್ನು ಕಾಲೇಜಿನ ಸಭಾಂಗಣದಲ್ಲಿ ನಡೆದ ಶಿಕ್ಷಕ ರಕ್ಷಕ ಸಂಘದ ಸಭೆಯಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಅನುಪಮ ಎಸ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಸಾಧನೆ ಮಾಡಿ ತಮ್ಮ ಹೆತ್ತವರಿಗೆ ಒಳ್ಳೆಯ ಹೆಸರು ತರುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಹೆತ್ತವರು ತಮ್ಮ ಮಕ್ಕಳ ಮೇಲೆ ಸರಿಯಾಗಿ ನಿಗವಹಿಸುವ ಮೂಲಕ ತಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆದು ಕೋಳ್ಳುವ ಹಾಗೆ ನೋಡಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಸಂಯೋಜಕರಾದ ಶ್ರೀ ಸೂರಜ್ ಕುಮಾರ್ ಶೆಟ್ಟಿ ಬಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರವಿಚಂದ್ರ , ಐಕ್ಯೂಏಸಿ ಸಂಯೋಜಕರಾದ ಶ್ರೀ ಸಂದೀಪ್ ಕೆ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಹರೀಶ್ ಕಾಂಚನ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ವಿಶ್ವನಾಥ ಆಚಾರ್ಯ ಮತ್ತು ಕನ್ನಡ ವಿಭಾಗದ ಉಪನ್ಯಾಸಕಿ ಮಮತಾ ನಿರೂಪಿಸಿದರು.