ಬಸ್ರೂರು ಶ್ರೀ ಶಾರದಾ ಕಾಲೇಜು: ವಾರ್ಷಿಕೋತ್ಸವ ಸಮಾರಂಭ
"ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಚೆನ್ನಾಗಿ ರೂಪಿಸಿಕೊಂಡು ದೇಶ ಕಟ್ಟುವ ಕೆಲಸ ಮಾಡಿ"---ಬಸ್ರೂರು ಅಪ್ಪಣ್ಣ ಹೆಗ್ಡೆ

Views: 215
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಂಚಾಲಕರಾದ ಶ್ರೀ ಬಿ ಅಪ್ಪಣ್ಣ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಚೆನ್ನಾಗಿ ರೂಪಿಸಿಕೊಂಡು ದೇಶ ಕಟ್ಟುವ ಕೆಲಸ ಮಾಡಿ ಎಂದು ಕಿವಿ ಮಾತು ಹೇಳಿದರು.
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ ಇದರ ಆಡಳಿತ ಅಧಿಕಾರಿ ಡಾ.ಜಗದೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳ ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ ಎಂದು ಹೇಳಿದರು.
ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಮತ್ತು ಕನ್ನಡ ಉಪನ್ಯಾಸಕ ಶ್ರೀ ಕರುಣಾಕರ್ ಬಳ್ಕೂರು ಸ್ವಸ್ತಿ ವಾಚನ ಗೈದರು. ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಅನುಪಮ ಎಸ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶ್ರೀ ಶಾರದಾ ಕಾಲೇಜು ಬಸ್ರೂರು ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀ ಕೆ ಜಯಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ ಚಂದ್ರಾವತಿ ಶೆಟ್ಟಿ ಶೈಕ್ಷಣಿಕ ವರ್ಷದ ವರದಿ ವಾಚಿಸಿದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀ ನಾರಾಯಣ ಪೈ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ರವಿಚಂದ್ರ, ಐಕ್ಯೂಏಸಿ ಸಂಯೋಜಕರಾದ ಶ್ರೀ ಸಂದೀಪ್ ಕೆ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಸೂರಜ್ ಕುಮಾರ್ ಶೆಟ್ಟಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ, ಕ್ರೀಡಾ ಮತ್ತು ಶೈಕ್ಷಣಿಕ ವಿಭಾಗದ ಸಾಧಕರ ಪಟ್ಟಿಯನ್ನು ವಾಚಿಸಿದರು.
ಕಾರ್ಯಕ್ರಮವನ್ನು ಉಪನ್ಯಾಸಕರಾದ ಶ್ರೀ ರಾಘವೇಂದ್ರ ಶೆಟ್ಟಿ, ಶ್ರೀಮತಿ ಪ್ರಮೀಳಾ ಮತ್ತು ಕುಮಾರಿ ಮಾನವಿ ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಮತ್ತು ಸಾಂಸ್ಕೃತಿಕ ಸಂಘದ ಸಂಯೋಜಕರಾದ ಶ್ರೀ ಕುಮಾರ್ ಪಿ ದನ್ಯವಾದಗೈದರು. ಕಾಲೇಜಿನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.