ಯುವಜನ

ಬಾರಿ ಮಳೆಗೆ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕನ ಶವ ಪತ್ತೆ 

Views: 48

ಹಾವೇರಿ: ನಿನ್ನೆ ಸುರಿದ ಬಾರಿ ಮಳೆಗೆ 12 ವರ್ಷದ ಬಾಲಕನೋರ್ವ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಹಾವೇರಿ ನಗರದ ಎಸ್ಪಿ ಕಚೇರಿ ಮುಂಭಾಗ ನಡೆದಿತ್ತು. ಇದೀಗ ಆ ಬಾಲಕ ಪತ್ತೆಯಾಗಿದ್ದಾನೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಬಾಲಕನನ್ನು ಮೇಲೆತ್ತಿದ್ದಾರೆ.

ವೇದು ಎಂಬ ಬಾಲಕ ಸ್ನೇಹಿತರೊಂದಿಗೆ ಮಳೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಕೊಚ್ಚಿ ಹೋಗಿದ್ದಾನೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಹುಡುಕಾಡಿದ್ದಾರೆ. ಈ ವೇಳೆ ಮೆಡಿಕಲ್ ಶಾಪ್ ಮುಂಭಾಗದಲ್ಲಿದ್ದ ಸ್ಲ್ಯಾಬ್ನಲ್ಲಿ ಪತ್ತೆಯಾಗಿದ್ದಾನೆ.

ಪತ್ತೆಯಾದ ಬಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರು ತಕ್ಷಣವೇ ಜಿಲ್ಲಾಸ್ಪತ್ರೆಗೆ ಹೊತ್ತು ಸಾಗಿಸಿದ್ದಾರೆ. ಆ್ಯಂಬುಲೆನ್ಸ್ ನಲ್ಲಿ ಕೃತಕ ಆಕ್ಸಿಜನ್ ಹಾಕಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ಬಾಲಕ ಪರಿಶೀಲನೆ ನಡೆಸಿದ ವೈದ್ಯರು ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ.

Related Articles

Back to top button