ಬಿಜೆಪಿಗೆ ಆಪರೇಷನ್ ಕಮಲದಿಂದ ಮುಳುವಾಯಿತು: ಕೆ.ಎಸ್.ಈಶ್ವರಪ್ಪ

Views: 0
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯಿತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದು ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.
ಅವರು ಹುಬ್ಬಳ್ಳಿಯಲ್ಲಿ ಮಾತನಾಡುತ್ತಾ, 2019ರಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕೆಡವಲು ಬಿಜೆಪಿ ಪಕ್ಷವು ಕಾಂಗ್ರೆಸ್ ಜೆಡಿಎಸ್ ಪಕ್ಷದ 16 ಶಾಸಕರ ರಾಜೀನಾಮೆ ಕೊಡಿಸಿ ಆಪರೇಷನ್ ಕಮಲ ನಡೆಸಿತ್ತು. ನಂತರ ನಡೆದಿದ್ದ ಉಪಚುನಾವಣೆಯಲ್ಲಿ 14 ಕಡೆ ಬಿಜೆಪಿ ಗೆಲುವು ಕಂಡಿತ್ತು.
ಬಾಂಬೆ ಟೀಮನ್ನು ಬಿಜೆಪಿಗೆ ಕರೆ ತಂದಿರುವುದಕ್ಕೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲು ಮತ್ತೊಂದು ಕಾರಣವಾಯಿತು.
ಬಿಜೆಪಿಯಲ್ಲಿ ಬಹಿರಂಗವಾಗಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವದ ಸಂಗತಿ. ಇಂತಹ ಸಂಗತಿಯನ್ನು ನಾಲ್ಕು ಗೋಡೆಗಳ ಮಧ್ಯೆ ಚರ್ಚೆಯಾಗಬೇಕೇ ವಿನಹ ಬಹಿರಂಗ ಹೇಳಿಕೆ ನೀಡುವುದು ತರವಲ್ಲ
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಕಾರ್ಯಕರ್ತರು ನಿರಾಶೆಯಲ್ಲಿದ್ದಾರೆ ಹೀಗಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಕಾರ್ಯಕರ್ತರಲ್ಲಿ ಉತ್ಸಾಹ ತುಂಬವ ಕೆಲಸ ಆಗಬೇಕಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸುತ್ತಿದೆ ಎಂದರು.