ಇತರೆ

ಬೆಂಗಳೂರಿನಲ್ಲಿ ಆರು ಜನ ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯಮಂತ್ರಿ ಮುಂದೆ ಶರಣು

Views: 173

ಕನ್ನಡ ಕರಾವಳಿ ಸುದ್ದಿ: ನಕ್ಸಲ್ ಕಾರ್ಯಕರ್ತೆ ಮುಂಡಗಾರು ಲತಾ ಸೇರಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರನ್ನು ಒಳಗೊಂಡ ಆರು ಮಂದಿ ನಕ್ಸಲ್ ಹೋರಾಟಗಾರರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾದರು.

ಮಾವೋವಾದಿ ನಕ್ಸಲರು ಶರಣಾಗತಿಯಿಂದ ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಇಂತಹದೊಂದು ಘಟನೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಸಾಕ್ಷಿಯಾಗಿದೆ.

ಮುಂಡಗಾರು ಲತಾ ನೇತೃತ್ವದಲ್ಲಿ ಆರು ಮಂದಿ ನಕ್ಸಲರರು ಬಂದೂಕಿನ ಹಾದಿಯನ್ನು ತೊರೆದು ಪ್ರಜಾಸತ್ತಾತ್ಮಕ ಹಾದಿಯನ್ನು ತುಳಿಯುವ ಉದ್ದೇಶದಿಂದ ಶರಣಾಗಿದ್ದಾರೆ.

ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರು ನಕ್ಸಲರು ಶರಣಾಗತರಾಗುತ್ತಾರೆ ಎಂದು ಹೇಳಲಾಗಿತ್ತು.ಆದರೆ ಕೊನೆಯಗಳಿಗೆಯಲ್ಲಿ ಬದಲಾವಣೆಗೊಂಡು ಚಿಕ್ಕಮಗಳೂರಿನಿಂದ ನೇರವಾಗಿ ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ನಕ್ಸಲರು ಶರಣಾಗತರಾದರು.

ಶೃಂಗೇರಿ ತಾಲೂಕು ಮುಂಡಗಾರು ಲತಾ, ದಕ್ಷಿಣ ಕನ್ನಡ ಜಿಲ್ಲೆ ಕುತ್ಲೂರಿನ ಸುಂದರಿ, ಬಾಳೆಹೊಳೆಯ ವನಜಾಕ್ಷಿ, ಆಂಧ್ರ ಪ್ರದೇಶದ ಮಾರೆಪ್ಪ ಅರೋಲಿ ಅಲಿಯಾಸ್ ಜಯಣ್ಣ, ತಮಿಳುನಾಡಿನ ಕೆ.ವಸಂತ, ಕೇರಳದ ಟಿ.ಎನ್.ಜೀಶ ಶರಣಾಗಿ ಸಮಾಜದ ಮುಖ್ಯವಾಹಿನಿ ಸೇರಿದ್ದಾರೆ. ಶೃಂಗೇರಿ ತಾಲೂಕು ಕಿಗ್ಗಾ ಮೂಲದ ರವಿ ಎಂಬಾತ ಮಾತ್ರ ಶರಣಾಗುವುದು ಬಾಕಿ ಇದ್ದು, ಆ ಪ್ರಕ್ರಿಯೆ ಕೂಡ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ

ಈಗಾಗಲೇ ಮಹಿಳಾ ಮಾವೋವಾದಿಗಳು ಬೇಡಿಕೆಯನ್ನು ಇಟ್ಟಿದ್ದಾರೆ. ಅಲ್ಲದೆ ಘನತೆಯಿಂದ ಶರಣಾಗತಿ ಪ್ರಕ್ರಿಯೆಯನ್ನು ಕೈಗೊಳ್ಳಬೇಕು ಎಂಬ ಮನವಿಯನ್ನು ಮಾಡಿದ್ದಾರೆ.

ನಕ್ಸಲ್ ಮುಖಂಡ ವಿಕ್ರಂಗೌಡ ಎನ್‌ಕೌಂಟರ್‌ಗೆ ಬಲಿಯಾದ ನಂತರ ಉಳಿದ ನಕ್ಸಲರನ್ನು ಶರಣಾಗಿಸುವ ಪ್ರಕ್ರಿಯೆಗೆ ವೇಗ ಸಿಕ್ಕಿತ್ತು.

ಕರ್ನಾಟಕ, ಕೇರಳ, ತಮಿಳುನಾಡಿನ 6 ಜನ ಸಮಾಜದ ಮುಖ್ಯವಾಹಿನಿಗೆ ಬರಲು ಒಪ್ಪಿದ್ದೇವೆ. ನಮ್ಮ ಕೊನೆ ಉಸಿರು ಇರುವವರೆಗೂ ಜನಪರ ಹೋರಾಟಕ್ಕೆ ಹಿಂಜರಿಯುವುದಿಲ್ಲ. ಶರಣಾಗತಿ/ಪುನರ್ವಸತಿ ಸಮಿತಿ, ಶಾಂತಿಗಾಗಿ ನಾಗರಿಕರ ವೇದಿಕೆಯವರು ಸರಕಾರ ನೀಡಿದ ಎಲ್ಲ ಭರವಸೆಗಳನ್ನು ಅರ್ಥ ಮಾಡಿಸಿದ್ದಾರೆ. ಸರಕಾರ ಕೂಡ ನಮ್ಮ ಎಲ್ಲ ಬೇಡಿಕೆ ಈಡೇರಿಸುವ ಭರವಸೆ ಇದೆ ಎಂದು ಮುಂಡಗಾರು ಲತಾ ಹೇಳಿದ್ದಾರೆ.

 

 

Related Articles

Back to top button