ಬ್ರಹ್ಮಾವರದ ಪೇತ್ರಿಯಲ್ಲಿ ಲಾರಿ-ಸ್ಕೂಟಿ ಡಿಕ್ಕಿ: ಸಾಸ್ತಾನದ ಯುವಕ ಸಾವು

Views: 233
ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ತಾಲೂಕಿನ ಪೇತ್ರಿ ಬಸ್ಟ್ಯಾಂಡ್ ಬಳಿ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಏ.4 ರಂದು ಶುಕ್ರವಾರ ಸಂಜೆ ನಡೆದಿದೆ.
ಮೃತಪಟ್ಟ ಯುವಕ ಸಾಸ್ತಾನ, ಐರೋಡಿ ಗೋಳಿಬೆಟ್ಟು ನಿವಾಸಿ ದೀಕ್ಷಿತ್ (24) ಸಹಸವಾರ ಅಭಿಷೇಕ್ ಗಂಭೀರ ಗಾಯಗೊಂಡಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೂಡ್ಲು ಫಾಲ್ಸ್ ಗೆ ಪ್ರವಾಸಕ್ಕೆ ಹೋಗಿದ್ದ ಯುವಕರು ಹಿಂದಿರುಗಿ ಬರುವಾಗ ಟಿಪ್ಪರ್ ಚಾಲಕ ಅತೀವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬ್ರಹ್ಮಾವರದಿಂದ ಕುಕ್ಕೆಹಳ್ಳಿ ಕಡೆಗೆ ಹೋಗುವ ಸಲುವಾಗಿ ಪೇತ್ರಿ ಜಂಕ್ಷನ್ ನಲ್ಲಿ ಬಲಕ್ಕೆ ತಿರುಗುವ ವೇಳೆ ಹೆಬ್ರಿ ಕಡೆಯಿಂದ ಬ್ರಹ್ಮಾವರಕ್ಕೆ ಹೋಗುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದಿದ್ದು ಇಬ್ಬರೂ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗಳಾಗಿದ್ದು ದೀಕ್ಷೀತ್ ಸ್ಥಳದಲ್ಲಿಯೇ ಮೃತಪಟ್ಟಿದ್ದು ಅಭಿಷೇಕ್ ಗಂಭೀರ ಗಾಯಗೊಂಡಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.