ಧಾರ್ಮಿಕ
ಬ್ರಹ್ಮಾವರ:ಭಜನಾ ತರಬೇತಿದಾರ ಮಲಗಿದ್ದಲ್ಲೇ ಸಾವು
Views: 170
ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ನಡೂರು ಗ್ರಾಮದ ನಿವಾಸಿಯಾಗಿರುವ ಪ್ರಕಾಶ್ ಕುಲಾಲ್ ಅತ್ಯಂತ ಚುರುಕಿನ, ಪ್ರತಿಭಾಶಾಲಿ ಯುವ ಭಜನಾ ತರಬೇತುದಾರರಾಗಿದ್ದರು. ಭಜನಾ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ್ದರು. ಅವರಿಗೆ ಆತ್ಮೀಯರೊಬ್ಬರು ಕರೆ ಮಾಡಿದಾಗ ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡು ಮನೆಯ ಮಾಡಿನ ಹಂಚು ತೆಗೆದು ಒಳಗೆ ಹೋಗಿ ನೋಡಿದಾಗ ಪ್ರಕಾಶ್ ಅವರು ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.
ಪ್ರಕಾಶ್ ಕುಲಾಲ್ ಅತಿದೊಡ್ಡ ಭಜನಾ ಕಾರ್ಯಕ್ರಮಗಳಲ್ಲಿ ಒಂದಾದ ಸಂಕೀರ್ತನ ಮಂದಾರ್ತಿ ಸೇರಿ ಹತ್ತು ಹಲವು ಕಡೆಗಳಲ್ಲಿ ತಮ್ಮನ್ನು ಭಜನೆಗಾಗಿ ಸಮರ್ಪಿಸಿಕೊಂಡ ಯುವಕ. ಯಾವುದೇ ಹಣ ಅಥವಾ ಇತರ ಫಲಾಪೇಕ್ಷೆಗಳಿಲ್ಲದೆ ಭಜನಾ ತರಬೇತಿ ನೀಡುತ್ತಿದ್ದ ತನ್ನ ಹೆಚ್ಚಿನ ಸಮಯವನ್ನು ಭಜನೆಗಾಗಿ ಮೀಸಲಿಡುತ್ತಿದ್ದರು. ಮೃತರು ಪತ್ನಿ, ಮಗು ಮತ್ತು ಪೋಷಕರನ್ನು ಅಗಲಿದ್ದಾರೆ.






