ಇತರೆ

ಬ್ರಹ್ಮಾವರ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

Views: 198

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹಾಲಿನ ಡೈರಿ ಬಳಿಯ ರೈಲ್ವೇ ಹಳಿಯಲ್ಲಿ  ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.

ಸುಮಾರು 25 ರಿಂದ 35 ವರ್ಷ ವಯಸ್ಸಿನ ಅಪರಿಚಿತ ಯುವಕ ಮತ್ಸ್ಯಗಂಧ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮೃತದೇಹ ಛಿದ್ರವಾಗಿ ಬಿದ್ದಿರುವುದು ಕಂಡುಬಂದಿದೆ. ರೈಲ್ವೆ ಕಂಬ ಸಂಖ್ಯೆ 681/6 ರ ಬಳಿ ತಲೆ ಮತ್ತು ಕೈಗಳು ಪತ್ತೆಯಾಗಿವೆ.

ಯಾವುದೋ ಕಾರಣಕ್ಕೆ ಮನನೊಂದು ಈ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button