ಪ್ರವಾಸೋದ್ಯಮ

ಭಾರತ- ಪಾಕ್ ಉದ್ವಿಗ್ನ ಸ್ಥಿತಿ: ಮೇ 15ರವರೆಗೆ ನಾಗರಿಕ ವಿಮಾನ ಹಾರಾಟ ಸ್ಥಗಿತ.. ಎಲ್ಲೆಲ್ಲಿ?

Views: 86

ಕನ್ನಡ ಕರಾವಳಿ ಸುದ್ದಿ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಗಡಿಯಲ್ಲಿ ಗುಂಡಿನ ಶಬ್ಧ ಕೇಳಿ ಬರುತ್ತಿವೆ. ಮೇ 7 ರಂದು ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿದ ಬಳಿಕ ಪಾಕಿಸ್ತಾನ ಗಲಿಬಿಲಿಗೊಂಡಿದೆ.

ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಿದ್ದಕ್ಕೆ ಕೆರಳಿರುವ ಪಾಕಿಸ್ತಾನ, ಗಡಿಯಲ್ಲಿ ಭಾರತೀಯ ನಾಗರಿಕರ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸ್ತಿದೆ. ಇದೀಗ ಪಾಕ್ ನಿಂದ ಮತ್ತೆ ದಾಳಿಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೇ 15ರವರೆಗೆ ನಾಗರಿಕ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

ಎಲ್ಲೆಲ್ಲಿ ಹಾರಾಟ ಸ್ಥಗಿತ..? ಶ್ರೀನಗರ ಮತ್ತು ಅಮೃತಸರ ಸೇರಿದಂತೆ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ 32 ವಿಮಾನ ನಿಲ್ದಾಣಗಳಲ್ಲಿ ವಿಮಾನ ಹಾರಾಟ ಸ್ಥಗಿತಗೊಂಡಿದೆ. ಮೇ 15ರವರೆಗೆ ಶ್ರೀನಗರ ಮತ್ತು ಅಮೃತಸರ ಸೇರಿದಂತೆ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ 32 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನ ಸ್ಥಗಿತಗೊಳಿಸಲಾಗಿದೆ. ಅಧಮ್‌ಪುರ್, ಅಂಬಾಲಾ, ಅಮೃತಸರ, ಅವಂತಿಪುರ, ಬಟಿಂಡಾ, ಭುಜ್, ಬಿಕಾನೇರ್, ಚಂಡೀಗಢ, ಹಲ್ವಾರಾ, ಹಿಂಡನ್, ಜಮ್ಮು, ಜೈಸಲ್ಮೇರ್, ಜಾಮ್‌ನಗರ, ಜೋಧ್‌ಪುರ, ಕಾಂಡ್ಲಾ, ಕಂಗ್ರಾ (ಗಗ್ಗಲ್), ಕೆಶೋದ್, ಕಿಶನ್‌ಗಢ್, ಕುಲು ಮನಾಲಿ (ಭುಂಟರ್), ಲೇಹ್, ಲೂಧಿಯಾನಾ, ಮುಂದ್ರಾ, ನಲಿಯಾ, ಪಠಾಣ್‌ಕೋಟ್, ಪಟಿಯಾಲ, ಪೋರಬಂದರ್, ರಾಜ್‌ಕೋಟ್ (ಹಿರಾಸರ್), ಸರ್ಸಾವಾ, ಶಿಮ್ಲಾ, ಶ್ರೀನಗರ, ಥೋಯಿಸ್ ಮತ್ತು ಉತ್ತರಲೈ.

32 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಸಂಬಂಧಿತ ವಾಯುಯಾನ ಅಧಿಕಾರಿಗಳು ಮಾಹಿತಿ ನೀಡಿದ್ದು, ನಾಗರಿಕ ಸುರಕ್ಷತೆ ದೃಷ್ಟಿಯಿಂದ ವಿಮಾನ ಹಾರಾಟವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Related Articles

Back to top button