ಮಂಗಳೂರು ಸಿಸಿಬಿ ಪೊಲೀಸರಿಂದ ಕಾರ್ಯಾಚರಣೆ : 119 ಕೆ.ಜಿ ಗಾಂಜಾ ವಶ, ನಾಲ್ವರು ಅರೆಸ್ಟ್

Views: 83
ಕನ್ನಡ ಕರಾವಳಿ ಸುದ್ದಿ: ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 119 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊಯ್ದಿನ್ ಶಬ್ಬಿರ್(38), ಆಂಧ್ರಪ್ರದೇಶ ರಾಜ್ಯದ ವಿಜಯವಾಡ ಜಿಲ್ಲೆಯ ಮಹೇಶ್ ದ್ವಾರಿಕಾನಾಥ ಪಾಂಡೆ(30), ಕೇರಳ ರಾಜ್ಯದ ಅಲುಯಾ ಜಿಲ್ಲೆಯ ಅಜಯ್ ಕೃಷ್ಣ(33) ಮತ್ತು ಹರಿಯಾಣ ರಾಜ್ಯದ ಜಿಂದ್ ಜಿಲ್ಲೆಯ ಜೀವನ್ ಸಿಂಗ್(35) ಬಂಧಿತರು.
ಮಂಗಳೂರು ನಗರಕ್ಕೆ ಆಂಧ್ರಪ್ರದೇಶ ರಾಜ್ಯದಿಂದ ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಕಾರಿನಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ ಎರಡು ವಾಹನಗಳನ್ನು ಗುರುತಿಸಿ, ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದನ್ನು ಪತ್ತೆ ಹಚ್ಚಲಾಗಿದೆ ” ಎಂದು ಹೇಳಿದರು.
“ಆರೋಪಿಗಳು ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ವಾಹನವನ್ನು ಹಾಗೂ ಈ ವಾಹನಗಳಲ್ಲಿ ಸಾಗಿಸುತ್ತಿದ್ದ ರೂ. 35 ಲಕ್ಷ ಮೌಲ್ಯದ ನ 119 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ 5 ಮೊಬೈಲ್ ಫೋನ್ಗಳು, ಮೀನು ಸಾಗಾಟಕ್ಕೆ ಉಪಯೋಗಿಸುವ ಮೀನಿನ ಕ್ರೆಟ್ ಹಾಗೂ ಇತರ ಸ್ವತ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಆಂಧ್ರಪ್ರದೇಶದಿಂದ ಬೆಂಗಳೂರು – ಮಂಗಳೂರು ಮೂಲಕ ಕೇರಳ ರಾಜ್ಯದ ಕಾಸರಗೋಡಿಗೆ ಗೂಡ್ಸ್ ಟೆಂಪೋ ಹಾಗೂ ಕಾರಿನಲ್ಲಿ ಸಾಗಿಸುತ್ತಿದ್ದರು. ಆರೋಪಿಗಳಿಂದ ವಶಪಡಿಸಿಕೊಂಡ ಸ್ವತ್ತಿನ ಒಟ್ಟು ಮೌಲ್ಯ 51 ಲಕ್ಷ ರೂ. ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ” ಎಂದು ಮಾಹಿತಿ ನೀಡಿದರು.