ಸಾಮಾಜಿಕ

ಮದುವೆ ಮನೆಗೆ ನುಗ್ಗಿದ ಚಿರತೆ, ವಧು-ವರರು ಸೇರಿ ದಿಕ್ಕಾಪಾಲಾಗಿ ಓಡಿದ ಜನರು!

Views: 215

ಕನ್ನಡ ಕರಾವಳಿ ಸುದ್ದಿ :ಮದುವೆ ಮನೆಯೊಂದಕ್ಕೆ  ಚಿರತೆಯೊಂದು ನುಗ್ಗಿದ್ದು, ತೀವ್ರ ಆತಂಕಕ್ಕೆ ಕಾರಣವಾಯಿತು. ಘಟನೆಯಲ್ಲಿ ಅರಣ್ಯಾಧಿಕಾರಿಯೊಬ್ಬರು ಗಾಯಗೊಂಡಿದ್ದು, ಜೀವ ಉಳಿಸಿಕೊಳ್ಳಲು ಓಡಿದ ವಧು-ವರರು ಕಾರಿನಲ್ಲಿ ಸಿಲುಕಿಕೊಳ್ಳುವಂತಾಯಿತು.

ನಗರದ ಬುದ್ಧೇಶ್ವರ ರಸ್ತೆ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಚಿರತೆ ಬ್ಯಾಂಕ್ವೆಟ್ ಹಾಲ್‌ಗೆ ಪ್ರವೇಶಿಸಿದ ಕೂಡಲೇ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಧಿಕ್ಕಾಪಾಲಾಗಿ ಓಡಿದರು. ಸ್ಥಳದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ.

ಚಿರತೆ ನುಗ್ಗುತ್ತಿದ್ದಂತೆ ಮಂಟಪದಲ್ಲಿ ಕುಳಿತಿದ್ದ ವಧು-ವರರೂ ಕೂಡ ಓಡಿ ಹೋಗಿ ಕಾರಿನಲ್ಲಿ ಲಾಕ್ ಮಾಡಿಕೊಂಡಿದ್ದಾರೆ.

ತಕ್ಷಣ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಹಲವು ಗಂಟೆಗಳ ಪ್ರಯತ್ನದ ನಂತರ ತಡರಾತ್ರಿ 2 ಗಂಟೆ ಸುಮಾರಿಗೆ ಚಿರತೆಯನ್ನು ಸೆರೆಹಿಡಿಯಲಾಗಿದೆ.

ಪೊಲೀಸರ ಪ್ರಕಾರ, ಚಿರತೆ ಹಿಡಿಯುವ ವೇಳೆ ಅರಣ್ಯ ಇಲಾಖೆ ಅಧಿಕಾರಿ ಮುಕದ್ದರ್ ಅಲಿ ಅವರ ಕೈಗೆ ಗಾಯಗಳಾಗಿವೆ. ಚಿರತೆ ಹಿಡಿಯುವವರೆಗೂ, ವಧು ಮತ್ತು ವರರ ಕುಟುಂಬದವರು ಸುರಕ್ಷತೆಗಾಗಿ ತಮ್ಮ ವಾಹನಗಳಲ್ಲಿ ಕುಳಿತಿದ್ದರು ಎಂದು ಅತಿಥಿಯೊಬ್ಬರು ಹೇಳಿದ್ದಾರೆ.

 

Related Articles

Back to top button