ಜನಮನ

ಮೇ.1ರಂದು ಉಡುಪಿ ಜಿಲ್ಲಾ 17ನೇ ಸಾಹಿತ್ಯ ಸಮ್ಮೇಳನದಲ್ಲಿ “ಕುಂದಾಪ್ರ ಡಾಟ್ ಕಾಂ” ಸಂಪಾದಕ ಸುನಿಲ್ ಬೈಂದೂರು ಅವರಿಗೆ ಸನ್ಮಾನ

Views: 28

ಕನ್ನಡ ಕರಾವಳಿ ಸುದ್ದಿ: ಉಡುಪಿ ರಾಜಾಂಗಣದಲ್ಲಿ ಜರುಗಲಿರುವ ಉಡುಪಿ ಜಿಲ್ಲಾ ಹದಿನೇಳನೇ ಸಾಹಿತ್ಯ ಸಮ್ಮೇಳನದ ಸಂಘ ಸಂಸ್ಥೆ ವಿಭಾಗದ ಗೌರವಕ್ಕೆ ಜಿಲ್ಲೆಯ ಅಗ್ರಮಾನ್ಯ ಪೋರ್ಟೆಲ್ `ಕುಂದಾಪ್ರ ಡಾಟ್ ಕಾಂ’ ಪಾತ್ರವಾಗಿದೆ. 

ಕುಂದಾಪುರ ತಾಲೂಕಿನ ಮೊದಲ ಪೂರ್ಣಪ್ರಮಾಣದ ಪೋರ್ಟೆಲ್ ಆಗಿ 2002ರಲ್ಲಿ ಆರಂಭಗೊಂಡ ಕುಂದಾಪ್ರ ಡಾಟ್ ಕಾಂ ಕಳೆದ ಹದಿಮೂರು ವರ್ಷಗಳಿಂದ ಸ್ಥಳೀಯ ಸುದ್ದಿ-ಮಾಹಿತಿ, ವಿಚಾರ ವೈಶಿಷ್ಟತೆಗಳನ್ನು ನಿರಂತರವಾಗಿ ಪ್ರಕಟಿಸುತ್ತಾ, ಕುಂದಾಪುರ – ಬೈಂದೂರು ತಾಲೂಕು ಹಾಗೂ ಜಿಲ್ಲೆಯಲ್ಲಿ ವಿವಿಧ ವಿಚಾರ ವಿಶಿಷ್ಟತೆಗಳನ್ನು ಪ್ರಕಟಿಸುವ ಮೂಲಕ ಗಮನ ಸೆಳೆದಿದೆ. ಗ್ರಾಮೀಣ ಭಾಗದ ಸಮಸ್ಯೆಗಳು, ಪ್ರಾದೇಶಿಕ ವೈಶಿಷ್ಟ್ಯಗಳನ್ನು ನಿರಂತವಾಗಿ ಪಸರಿಸುವ ಜೊತೆಗೆ ಕುಂದಾಪ್ರ ಕನ್ನಡ ಲೇಖನ ಬರಹಗಳು, ಅಂಕಣ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಜನಮಾಸನದಲ್ಲಿ ನೆಲೆಗೊಂಡಿದೆ.

ಈ ನಿರಂತರ ಸೇವೆಯನ್ನು ಗುರುತಿಸಿ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮೇ.01ರಂದು ನಡೆಯುವ ಉಡುಪಿ ಜಿಲ್ಲಾ ಹದಿನೇಳನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ‘ಕುಂದಾಪ್ರ ಡಾಟ್ ಕಾಂ’ ಸಂಸ್ಥೆಯನ್ನು ಗೌರವಿಸಲಾಗುತ್ತದೆ. ಸಂಸ್ಥೆಯ ಪರವಾಗಿ ಸಂಪಾದಕ ಸುನಿಲ್ ಬೈಂದೂರು ಅವರು ಸನ್ಮಾನವನ್ನು ಸ್ವೀಕರಿಸಲಿದ್ದಾರೆ.

Related Articles

Back to top button