ಜನಮನ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಆಲಿಕಲ್ಲು ಸಹಿತ ಭಾರೀ ಮಳೆ ಮುನ್ಸೂಚನೆ; ಏಪ್ರಿಲ್ 3ರಿಂದ ಯೆಲ್ಲೋ ಅಲರ್ಟ್ ಘೋಷಣೆ

Views: 258

ಕನ್ನಡ ಕರಾವಳಿ ಸುದ್ದಿ:ರಾಜ್ಯದಲ್ಲಿ ಬೇಸಿಗೆಯಲ್ಲೂ ವರುಣನ ಆರ್ಭಣ ಮುಂದುವರಿದಿದೆ. ಯುಗಾದಿ ವೇಳೆಗೆ ತಂಪೆರದ ಮಳೆಯು ಮತ್ತೆ ಐದು ದಿನಗಳ ಕಾಲ ಅಬ್ಬರಿಸಲಿದೆ. ಏಪ್ರಿಲ್ 1 ಹಾಗೂ 2ರಂದು ಕರ್ನಾಟಕದ ವಿವಿಧೆಡೆ ಮೋಡ ಕವಿದ ವಾತಾವರಣದೊಂದಿಗೆ ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.ಏಪ್ರಿಲ್ 3ರಿಂದ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40ರಿಂದ 50 ಕಿ.ಮೀವರೆಗೆ ತಲುಪಬಹುದು. ಹಾಗಾಗಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.

ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಏಪ್ರಿಲ್ 3ರಿಂದ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ,ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ,ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಒಡಿಶಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ಏಪ್ರಿಲ್ 1ರಂದು ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 3ರಂದು ಗುಡುಗು ಸಹಿತ ಮಳೆಯಾಗಲಿದೆ. ಏಪ್ರಿಲ್ 4ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.

Related Articles

Back to top button