ಕೃಷಿ
ವಾರಾಹಿ ಕಾಲುವೆ ನೀರು ಬಿಡುಗಡೆ ತಾತ್ಕಾಲಿಕ ಸ್ಥಗಿತ

Views: 108
ಕನ್ನಡ ಕರಾವಳಿ ಸುದ್ದಿ: ವಾರಾಹಿ ನೀರಾವರಿ ಯೋಜನೆಯಡಿಯಲ್ಲಿ ಬರುವ ಕಾಲುವೆ ಪ್ರದೇಶದಲ್ಲಿ ತುರ್ತು ದುರಸ್ಥಿ ಹಾಗೂ ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಈಗಾಗಲೇ ಬೇಸಿಗೆ ಹಂಗಾಮಿಗೆ ಸಂಬಂಧಿಸಿದಂತೆ ಕಾಲುವೆಯಲ್ಲಿ ಹರಿಸಿರುವ ನೀರನ್ನು ಮಾರ್ಚ್ 23ರಿಂದ 30ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.
ಈ ಪ್ರದೇಶದ ರೈತಾಪಿ ಬಾಂಧವರು ಇಲಾಖೆಯೊಂದಿಗೆ ಸಹಕರಿಸುವಂತೆ ಸಿದ್ಧಾಪುರ ವಾರಾಹಿ ಜಲಾಶಯ ಯೋಜನಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.