ಶಿಕ್ಷಣ
ಶಾಲೆಗೆ ಹೊರಡಲು ಸಿದ್ಧತೆಯಲ್ಲಿರುವಾಗಲೇ ಶಿಕ್ಷಕಿ ಕುಸಿದು ಬಿದ್ದು ಸಾವು

Views: 170
ಕನ್ನಡ ಕರಾವಳಿ ಸುದ್ದಿ: ಶಾಲೆಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದಾಗಲೇ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭಕ್ತನಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಲೋಚನಾ (49) ಮೃತ ಶಿಕ್ಷಕಿ. ಇಂದು ಬೆಳಿಗ್ಗೆ ಸುಲೋಚನಾ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ.
ಕುಸಿದು ಬಿದ್ದವರೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುಲೋಚನಾ, ನೆಲಮಂಗಲದ ಬಸವಣ್ಣ ದೇವರ ಮಠದ ಶಾಲೆಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.






