ಇತರೆ
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

Views: 36
ಕನ್ನಡ ಕರಾವಳಿ ಸುದ್ದಿ: ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಬಸವರಾಜು (38) ಎಂಬಾತ ಶರಾವತಿ ಬ್ಯಾರೆಕ್ 42ನೇ ಕೊಠಡಿಯಲ್ಲಿ ಈ ಕೃತ್ಯವೆಸಗಿದ್ದಾನೆ. ಲಾರಿ ಚಾಲಕನಾಗಿದ್ದ ಈತ ಪತ್ನಿ ಮಂಜುಳಾ ಅವರನ್ನು ಕಳೆದ ತಿಂಗಳು ಹತ್ಯೆ ಮಾಡಿದ್ದ ಆರೋಪ ಎದುರಿಸುತ್ತಿದ್ದ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಾಗಿದೆ.






