ಸದಾನಂದ ಗೌಡ ಪಕ್ಷ ತ್ಯಜಿಸುವ ತೀರ್ಮಾನ, RSS ಸಂಧಾನ ಏನಾಯ್ತು?

Views: 60
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಬೇಸರ ವ್ಯಕ್ತಪಡಿಸಿ ಇಂದು ತಮ್ಮ ನಿರ್ಧಾರವನ್ನು ಬಹಿರಂಗ ಪಡಿಸುವುದಾಗಿ ತಿಳಿಸಿದ್ದರು.
ಡಿ.ವಿ ಸದಾನಂದಗೌಡರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿದ್ದರು. ಕಾಂಗ್ರೆಸ್ ಪಕ್ಷ ಸೇರುವ ಆಫರ್ ಅನ್ನು ನೀಡಲಾಗಿತ್ತು.
ಡಿ.ವಿ ಸದಾನಂದಗೌಡರನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಿದ ಮೇಲೆ RSS ನಾಯಕರು ಅಲರ್ಟ್ ಆಗಿದ್ದಾರೆ. ಕಾಂಗ್ರೆಸ್ ಪಕ್ಷ ಸೇರುವ ಆಫರ್ ಬೆನ್ನಲ್ಲೇ RSS ನಾಯಕರು ಮಧ್ಯಸ್ಥಿಕೆ ವಹಿಸಿದ್ದು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಆರ್ಎಸ್ಎಸ್ ಪ್ರಮುಖರಲ್ಲಿ ದತ್ತಾತ್ರೇಯ ಹೊಸಬಾಳೆ, ಸಿ.ಆರ್. ಮುಕುಂದ್ ಅವರು ಡಿ.ವಿ ಸದಾನಂದಗೌಡರ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಸದ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗ್ತಿದೆ ಅಂತ ಹೇಳೋದಿಲ್ಲ. ನಿಮ್ಮ ಪ್ರಕರಣದಲ್ಲಿ ನಿಮ್ಮ ಹಿತವನ್ನ ಕಾಪಾಡಲು ಬದ್ಧರಿದ್ದೇವೆ. ಪಕ್ಷ ತ್ಯಜಿಸುವಂತಹ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಬಿಜೆಪಿಯಲ್ಲಿ ಇವತ್ತಿನ ವಾತಾವರಣ ಸರಿ ಹೋಗಬೇಕಿದೆ. ಹಿರಿಯ ನಾಯಕರನ್ನು ಕಡೆಗಣನೆ ಮಾಡೋದು ಸರಿಯಲ್ಲ ಎಂದು ಆರ್ಎಸ್ಎಸ್ ನಾಯಕರು ಹೇಳಿದ್ದಾರೆ. RSS ನಾಯಕರು ಮಧ್ಯಸ್ಥಿಕೆಗೆ ಡಿ.ವಿ ಸದಾನಂದಗೌಡರು ಮಣಿದಿದ್ದಾರೆ ಎಂದು ತಿಳಿದು ಬಂದಿದೆ.