ರಾಜಕೀಯ

ಸಿ.ಟಿ.ರವಿ ಬಂಧನ,ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Views: 90

ಕನ್ನಡ ಕರಾವಳಿ ಸುದ್ದಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿ.ಟಿ.ರವಿ ಪದ ಬಳಕೆ ಮಾಡಿರುವ ಯಾವುದೇ ದಾಖಲೆಗಳು ಇಲ್ಲ ಎಂದು ರೂಲಿಂಗ್ ಕೊಟ್ಟಿದ್ದಾರೆ. ಪೊಲೀಸರು ಬಂಧಿಸಿದ್ದು ಏಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು‌.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯ ಘನತೆಗೆ ಧಕ್ಕೆಯಾಗಿರುವುದು ಗಂಭೀರವಾಗಿ ಇರುವ ಆರೋಪ. ಇದು ಸಂಪೂರ್ಣ ತನಿಖೆಯಾಗಬೇಕು‌. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಎಫ್ಎಸ್ಎಲ್ ಗೆ ಕಳುಹಿಸಿ ಪರೀಕ್ಷೆಯಾಗಬೇಕು. ಸತ್ಯಾಸತ್ಯತೆ ಹೊರಗೆ ಬರಬೇಕು ಎಂದರು.

ಸಭಾಪತಿ ರೂಲಿಂಗ್ ಕೊಟ್ಟ ಮೇಲೂ ಸಿ.ಟಿ.ರವಿ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧದ ಒಳಗಡೆ ನುಗ್ಗಿ ಗೂಂಡಾವರ್ತನೆ ಮಾಡಿದ್ದಾರೆ. ಸಿ.ಟಿ.ರವಿ ಮಾಜಿ ಸಚಿವ, ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಅವರನ್ನು ಪೊಲೀಸರು ಹೊತ್ತಾಕ್ಕೊಂಡು‌ ಹೋಗಿ ಬಾಗಲಕೋಟ, ಗದಗ, ರಾಮದುರ್ಗ ಎಲ್ಲಾ ಕಡೆ ರಾತ್ರಿಯಿಡೀ ಆತಂಕವಾದಿಗಳ ರೀತಿ ಸುತ್ತಾಡಿಸಿದ್ದು ಸರಕಾರ ನಡೆದುಕೊಂಡ ರೀತಿ ಖಂಡನಾರ್ಹ ಎಂದು ವಾಗ್ದಾಳಿ ನಡೆಸಿದರು.

ಸರಕಾರ ಪೊಲೀಸರ ಮೂಲಕ 410ಕ್ಕೂ ಹೆಚ್ಚು ಕಿ.ಮೀ ರಾತ್ರಿಯಿಡೀ ಸಿ.ಟಿ ರವಿಯನ್ನು ಸುತ್ತಾಡಿಸಿ ಪೊಲೀಸರು ದಬ್ಬಾಳಿಕೆ ಮಾಡಿ ದೌರ್ಜನ್ಯ ನಡೆಸುವುದು ಖಂಡನೀಯ. ಸಿ.ಟಿ.ರವಿ ಬಂಧನ ಮಾಡಿರುವ ಕುರಿತು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಮಾಡುವ ಕರೆ ನೀಡಲಾಗಿದೆ. ಹಿಂದೆಂದೂ ಕೂಡ ನಮ್ಮ ರಾಜ್ಯದಲ್ಲಿ, ದೇಶದಲ್ಲಿ ಇಂಥ ಘಟನೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Related Articles

Back to top button