ಇತರೆ

ಸ್ಕಾರ್ಪಿಯೋ ಕಂಟೇನರ್- ಖಾಸಗಿ ಬಸ್ ನಡುವೆ ಭೀಕರ ಅಪಘಾತ ಐವರು ಸ್ಥಳದಲ್ಲೇ ಸಾವು 

Views: 76

ಕನ್ನಡ ಕರಾವಳಿ ಸುದ್ದಿ:ಸ್ಕಾರ್ಪಿಯೋ ಕಂಟೇನರ್ ಹಾಗೂ ಖಾಸಗಿ ಬಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರ ಹೆಸರು ಮತ್ತು ಮಾಹಿತಿ ಲಭ್ಯವಾಗಬೇಕಿದೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಮನಗೂಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Back to top button