ಇತರೆ
ಹುಲಿ ಕುತ್ತಿಗೆಗೆ ಬಾಯಿ ಹಾಕಿ ಎಳೆದುಕೊಂಡು ಹೋಗಿ ಬಾಲಕ ಸಾವು

Views: 75
ಕನ್ನಡ ಕರಾವಳಿ ಸುದ್ದಿ: ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನದೊಳಗಿರುವ ದೇವಾಲಯಕ್ಕೆ ಭೇಟಿ ನೀಡಲು ಪೋಷಕರೊಂದಿಗೆ ಹೋಗಿದ್ದ 7 ವರ್ಷದ ಬಾಲಕನನ್ನು ಹುಲಿ ಎಳೆದುಕೊಂಡು ಹೋಗಿ ಕೊಂದಿರುವ ಘಟನೆ ನಡೆದಿದೆ.
ಏಳು ವರ್ಷದ ಕಾರ್ತಿಕ್ ಸುಮನ್ ತನ್ನ ಚಿಕ್ಕಪ್ಪ ಹಾಗೂ ಅಜ್ಜಿ ಜೊತೆ ದೇವಸ್ಥಾನಕ್ಕೆ ಬಂದಿದ್ದ. ಅಲ್ಲಿ ದೇವರ ದರ್ಶನಕ್ಕೆ ಹೋಗುವಾಗ ಹುಲಿಯೊಂದು ಬಂದು ಬಾಲಕನ ಕುತ್ತಿಗೆಗೆ ಬಾಯಿ ಹಾಕಿ ಆತನನ್ನು ಎಳೆದುಕೊಂಡು ಹೋಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಮಗುವಿನ ಮೃತದೇಹವನ್ನು ಪೋಷಕರಿಗೆ ನೀಡಿದ್ದಾರೆ.