ಇನ್ನೊಬ್ಬಳ ಮೋಹಕ್ಕೆ ಬಿದ್ದ ಪತಿರಾಯ.. ಹೆಂಡತಿ ಪ್ರಶ್ನಿಸಿದಕ್ಕೆ ದುರಂತ!

Views: 150
ಕನ್ನಡ ಕರಾವಳಿ ಸುದ್ದಿ: ಅಂದದ ಹೆಂಡ್ತಿ ಇದ್ದರೂ ಇನ್ನೊಬ್ಬಳ ಮೋಹಕ್ಕೆ ಬಿದ್ದಿದ್ದ ಪತಿರಾಯ. ಹೆಂಡ್ತಿ ಪ್ರಶ್ನೆ ಮಾಡಿದ್ದಕ್ಕೆ ಅವಳಿಗೆ ವರದಕ್ಷಿಣೆ ಕಿರುಕುಳ ಕೊಡಲು ಶುರು ಮಾಡಿದ್ದ. ಗಂಡನ ಹಿಂಸೆಯಿಂದ ಬೇಸತ್ತ ಪತ್ನಿ ತನ್ನ ಪುಟ್ಟ ಹೆಣ್ಣು ಮಗುವನ್ನು ಬಿಟ್ಟು ದುರಂತ ಸಾವು ಕಂಡಿದ್ದು, ಇದೀಗ ಗಂಡ ಹೆಂಡ್ತಿ ಜಗಳದಲ್ಲಿ ಕೂಸು ಬಡವಾಯ್ತು ಎನ್ನುವಂತೆ ಪುಟ್ಟ ಮಗು ಅನಾಥವಾಗಿದೆ.
ಪೂಜಾಶ್ರೀ (28)ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾಶ್ರೀ ಗೆ ಮೂರು ವರ್ಷದ ಹಿಂದೆ ಪೋಷಕರು ನಿಶ್ಚಯಿಸಿದ್ದ ನಂದೀಶ್ ಜೊತೆ ವಿವಾಹವಾಗಿತ್ತು. ಪೂಜಾಶ್ರೀ- ನಂದೀಶ್ ದಾಂಪತ್ಯಕ್ಕೆ ಒಂದು ಹೆಣ್ಣು ಮಗು ಕೂಡ ಇದೆ. ಪತಿ ನಂದೀಶ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೇ, ಪೂಜಾಶ್ರೀ ಕೂಡ ಖಾಸಗಿ ಬ್ಯಾಂಕ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಆದರೇ, ಕಳೆದ ಒಂದು ವರ್ಷದಿಂದ ಪತಿ ನಂದೀಶ್ ಗೆ ಅನೈತಿಕ ಸಂಬಂಧ ಇರುವುದು ಪೂಜಾಶ್ರೀಗೆ ಗೊತ್ತಾಗಿದೆ. ಈ ಬಗ್ಗೆ ಪೂಜಾ ಪತಿ ನಂದೀಶ್ ರನ್ನು ಪ್ರಶ್ನಿಸಿದ್ದಾಳೆ. ಬಳಿಕ ನಂದೀಶ್, ಪೂಜಾಳಿಗೆ ಕಿರುಕುಳ ಕೊಡಲಾರಂಭಿಸಿದ್ದಾನೆ. ಈ ವೇಳೆ ನಂದೀಶ್ ತಾಯಿ, ನಿಮ್ಮ ಮನೆಯಿಂದ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪೂಜಾಶ್ರೀಗೆ ಹೇಳಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ.
ಬಳಿಕ ಪೂಜಾಶ್ರೀ ಗಂಡನ ಮನೆಯನ್ನು ಬಿಟ್ಟು ತವರು ಮನೆಗೆ ಹೋಗಿದ್ದರು. ಈ ಬಗ್ಗೆ ಮನೆಯಲ್ಲಿ ಎರಡು ಮೂರು ಭಾರಿ ರಾಜೀ ಪಂಚಾಯಿತಿ ನಡೆದಿದ್ದು, ಮತ್ತೆ ವರದಕ್ಷಿಣೆ ಕಿರುಕುಳ ನೀಡಲ್ಲ. ಅನೈತಿಕ ಸಂಬಂಧ ಬೆಳೆಸಲ್ಲ ಎಂದು ಭರವಸೆ ನೀಡಿ ಪತ್ನಿ ಪೂಜಾಶ್ರೀಯನ್ನು ತನ್ನ ಮನೆಗೆ ಕರೆದುಕೊಂಡು ಬಂದಿದ್ದ.
ಆದ್ರೆ, ಮೂರು ದಿನಗಳ ಹಿಂದೆ ನಂದೀಶ್ ಮತ್ತೆ ಜಗಳ ತೆಗೆದು ಪತ್ನಿ ಪೂಜಾಶ್ರೀ ಮೇಲೆ ಹಲ್ಲೆ ಮಾಡಿದ್ದ. ಇದರಿಂದ ಪೂಜಾಶ್ರೀ ಮತ್ತೆ ತಾಯಿ ಮನೆಗೆ ಹೋಗಿದ್ದಳು. ಮರು ದಿನ ಬೆಳಿಗ್ಗೆ ಪೂಜಾಶ್ರೀ ತವರು ಮನೆಗೆ ಹೋಗಿ ಹೊಸ ಕಥೆ ಕಟ್ಟಿ ಕರೆದುಕೊಂಡು ಹೋಗಿದ್ದ. ಆದ್ರೆ, ಸೋಮವಾರ ಪೂಜಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದಡಿ ಕೇಸ್ ದಾಖಲಾಗಿದ್ದು, ಪತಿ ನಂದೀಶ್ ನನ್ನು ಬಂಧಿಸಲಾಗಿದೆ.