ಇತರೆ

ಇಬ್ಬರು ಹೆಂಡತಿಯರ ಜಗಳ ವಿಕೋಪ: ಮೃತದೇಹಗಳನ್ನು ಕಾರಿನೊಳಗೆ ಹಾಕಿ ಸುಟ್ಟು ಹಾಕಿದ ಮೊದಲ ಪತ್ನಿ

Views: 35

ಕನ್ನಡ ಕರಾವಳಿ ಸುದ್ದಿ: ರಾಜಸ್ಥಾನದ ಅಜೀರ್‌ನಲ್ಲಿ ಕಾರೊಂದು ಬೆಂಕಿಗೆ ಆಹುತಿಯಾಗಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಸುದ್ದಿ ಹರಡಿತ್ತು. ಆರಂಭದಲ್ಲಿ ಇದು ಅಪಘಾತ ಎಂದ ಭಾವಿಸಲಾಗಿತ್ತು. ಕಾರಿನಿಂದ ಸ್ವಲ್ಪ ದೂರದಲ್ಲಿ ಮಹಿಳೆಯೊಬ್ಬರ ಶವ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದರಿಂದ ಇದನ್ನು ಸಹಜ ಸಾವಲ್ಲ ಎಂಬುದಾಗಿ ಪೊಲೀಸರಿಗೆ ಸಂಶಯ ಬಂದಿದೆ.

ಈ ಘಟನೆಯನ್ನು ಅಪಘಾತವೆಂಬಂತೆ ಬಿಂಬಿಸಲು ಮೃತದೇಹಗಳನ್ನು ಕಾರಿನೊಳಗೆ ಹಾಕಿ ಸುಟ್ಟು ಹಾಕಿದ್ದಾರೆ.

ಏನಿದು ಘಟನೆ?

ರಾಮ್ ಸಿಂಗ್ ಚೌಧರಿ, ಇವರ ತಾಯಿ ಪೂಸಿ ದೇವಿ, ರಾಮ್ ಸಿಂಗ್‌ ಎರಡನೇ ಪತ್ನಿ ಸೂರ್ಯಜ್ಞಾನ ದೇವಿ, ಚಿಕ್ಕಮ್ಮನ ಮಗಳು ಮಹಿಮಾ ಚೌಧರಿ ಮೃತಪಟ್ಟವರು. ಮೂವರ ಶವ ಕಾರೊಳಗೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸೂರ್ಯಗ್ಯಾನ್ ದೇವಿಯ ಶವ ಹತ್ತಿರದ ಹೊಲದಲ್ಲಿ ಗಂಟಲು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ರಾಮ್ ಸಿಂಗ್‌ಗೆ 2005ರಲ್ಲಿ ಸುನಿತಾ ಎಂಬಾಕೆಯ ಜತೆ ಮದುವೆಯಾಗಿದ್ದರೂ ಸಹ 2029ರಲ್ಲಿ ಸೂರ್ಯಗ್ಯಾನ್ ದೇವಿಯನ್ನು ಎರಡನೇ ಮದುವೆಯಾಗಿದ್ದ. ಒಂದೇ ಮನೆಯಲ್ಲಿ ಇಬ್ಬರೂ ವಾಸವಿದ್ದರು, ಮೊದಲ ಹೆಂಡತಿಯ ವಿರೋಧದ ನಡುವೆಯೂ ಈತ ಇನ್ನೊಂದು ಮದುವೆಯಾಗಿದ್ದರಿಂದ ದಿನಲೂ ಜಗಳ ನಡೆಯುತ್ತಿತ್ತು. ಜಗಳ ವಿಕೋಪಕ್ಕೆ ತಿರುಗಿದಾಗ ಮೊದಲ ಪತ್ನಿ ಸುನೀತಾ, ಆಕೆಯ ಮಗಳು ಸರಿತಾ ಮತ್ತು ಅಪ್ರಾಪ್ತ ಮಗ ಸೇರಿ ಹರಿತವಾದ ಆಯುಧಗಳಿಂದ ನಾಲ್ವರನ್ನು ಭೀಕರವಾಗಿ ಹತ್ಯೆಗೈದಿದ್ದಾರೆ.

ಸ್ಥಳೀಯರು ನೀಡಿದ ಸುಳಿವು ಮತ್ತು ತಾಂತ್ರಿಕ ಸಾಕ್ಷ್ಯಾಧಾರಗಳ ನೆರವಿನಿಂದ ಪೊಲೀಸರು ಆರೋಪಿ ಸುನಿತಾ ಮತ್ತು ಆಕೆಯ ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಜತೆಗೆ ಹತ್ಯೆಗೆ ಬಳಸಿದ ಕತ್ತಿಯನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Related Articles

Back to top button
error: Content is protected !!