ಇತರೆ
ಒಂದೇ ಕುಟುಂಬದ ಮೂವರು ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಸಾವು
Views: 39
ಕನ್ನಡ ಕರಾವಳಿ ಸುದ್ದಿ: ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಶಿರಗೋಳ ಗ್ರಾಮದಲ್ಲಿ ಕೆಬಿಜೆ ಎನ್ ಎಲ್ ಎಡದಂಡೆ ಕಾಲುವೆಯಲ್ಲಿ ಈ ದುರಂತ ಸಂಭವಿಸಿದೆ. ಬಸಮ್ಮ ಕೊಣ್ಣೂರು (21), ಸಂತೋಷ್ ಕೊಣ್ಣೂರು (16), ರವಿ ಕೊಣ್ಣೂರು (15) ನೀರುಪಾಲಾದವರು.
ಮೂವರು ಮುದ್ದೆಬಿಹಾಳ ಪಟ್ಟಣದ ಆಶ್ರಯ ಕಾಲೋನಿ ನಿವಾಸಿಗಳು. ಸ್ಥಳಕ್ಕೆ ಮುದ್ದೆಬಿಹಾಳ ಠಾಣೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಮೂವರಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.






