ಕರಾವಳಿ

ಕರಾವಳಿ ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ! ಶ್ರವಣಬೆಳಗೊಳ, ಕುಕ್ಕೆ, ಧರ್ಮಸ್ಥಳಕ್ಕೆ ಮತ್ತೆ ರೈಲು ಸೇವೆ ಪುನಾರಂಭ

Views: 86

ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನಿಂದ ಕರಾವಳಿಗೆ ಹೋಗುವ ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಸಿಹಿ ಸುದ್ದಿ ನೀಡಿದೆ.

ಧರ್ಮಸ್ಥಳ, ಕುಕ್ಕೆ ಶ್ರವಣಬೆಳಗೊಳ ಸೇರಿದಂತೆ ಹಲವು ಪುಣ್ಯ ಕ್ಷೇತ್ರಕ್ಕೆ ಹೋಗುವವರಿಗೆ ಈ ರೈಲು ಸಹಾಯವಾಗಲಿದೆ. ಆರು ತಿಂಗಳ ಹಿಂದೆ ರದ್ದಾಗಿದ್ದ ಬೆಂಗಳೂರು-ಮಂಗಳೂರು-ಕಾರವಾರ ರೈಲು ಸೇವೆ ಪುನಾರಂಭಗೊಳಿಸಲು ನಿರ್ಧರಿಸಲಾಗಿದೆ.

ಇದೀಗ ಈ ಬಗ್ಗೆ ರೈಲ್ವೆ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಬೆಂಗಳೂರು-ಮಂಗಳೂರು-ಕಾರವಾರ ರೈಲು ಸೇವೆಯಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಈ ಮೂಲಕ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು (16575/16576) ಮತ್ತೆ ತನ್ನ ಸೇವೆ ಮುಂದುವರಿಸಲಿದೆ. ಇದೀಗ ಮೊದಲಿನಂತೆ ತನ್ನ ಸಂಚಾರವನ್ನು ಯಶವಂತಪುರ ನಿಲ್ದಾಣದಿಂದ ಆರಂಭಿಸಲಿದೆ. ಪ್ರಯಾಣಿಕರು ಈ ರೈಲ್ವೆ ಸಂಚಾರ ಸೇವೆಯನ್ನು ಸದುಪಯೋಗ ಮಾಡಿಕೊಳ್ಳುವಂತೆ ರೈಲ್ವೆ ಇಲಾಖೆ ಹೇಳಿದೆ.

ಕಳೆದ ಆರು ತಿಂಗಳಿನಿಂದ ರದ್ದಾಗಿದ್ದ ಈ ರೈಲು, ಇದೀಗ ಮತ್ತೆ ಪ್ರಾರಂಭವಾಗಿರುವುದು ಪ್ರಯಾಣಿಕರಲ್ಲಿ ಸಂಸತ ತಂದಿದೆ. ಹಾಸನ, ಸಕಲೇಶಪುರ ಮಾರ್ಗದಲ್ಲಿ ವಿದ್ಯುದೀಕರಣ ಮತ್ತು ಇತರ ಕಾಮಗಾರಿಗಳ ಕಾರಣದಿಂದಾಗಿ ಈ ರೈಲು ರದ್ದಾಗಿತ್ತು. ಇದೀಗ ಮತ್ತೆ ಸಂಚಾರಿಸುವ ಮೂಲಕ ಪ್ರಯಾಣಿಕರಿಗೆ ಸೇವೆ ನೀಡಲು ಸಿದ್ಧವಾಗಿದೆ.

Related Articles

Back to top button