ಸಾಂಸ್ಕೃತಿಕ

ಕಾಂತಾರ ಸಿನಿಮಾ ಬಿಡುಗಡೆ ದಿನ ಥಿಯೇಟರ್ ಮುಂದೆ ದೈವಾರಾಧನೆ ಅನುಕರಣೆ ಮಾಡಿದ ವ್ಯಕ್ತಿ ಕ್ಷಮೆ

Views: 140

ಕನ್ನಡ ಕರಾವಳಿ ಸುದ್ದಿ: ಕಾಂತಾರ ಚಾಪ್ಟರ್-1 ಸಿನಿಮಾಗೆ ದೇಶಾದ್ಯಂತ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ಆರಂಭಕ್ಕೂ ಮುನ್ನವೇ ಚಿತ್ರತಂಡ ಚಿತ್ರದಲ್ಲಿ ಬರುವ ದೈವ ನೃತ್ಯವನ್ನು ಅನುಕರಣೆ ಮಾಡದಂತೆ ಮನವಿ ಮಾಡಿದ್ದರೂ, ಇದಕ್ಕೆ ತದ್ವಿರುದ್ಧವಾದ ಘಟನೆಗಳು ನಡೆಯುತ್ತಿದೆ.

ಸಿನಿಮಾದಲ್ಲಿ ದೈವದ ಅಂಶ ಜನರನ್ನು ಹೆಚ್ಚು ಆಕರ್ಷಿಸುತ್ತಿದ್ದು, ಕೆಲವೆಡೆ ಪ್ರೇಕ್ಷಕರು ಭಾವೋದ್ವೇಗಕ್ಕೆ ಒಳಗಾಗಿ ದೈವ ನೃತ್ಯವನ್ನು ಅನುಕರಣೆ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾರೆ.

ಈಗ ಇಂಥಹದ್ದೇ ಘಟನೆಯೊಂದು ವರದಿಯಾಗಿದ್ದು, ದೈವದ ಅನುಕರಣೆ ಮಾಡಿದ ವ್ಯಕ್ತಿಯೋರ್ವ ಕ್ಷಮೆ ಕೇಳಿದ್ದಾನೆ. ಸಿನಿಮಾ ರಿಲೀಸ್ ಆದ ಬಳಿಕ ವ್ಯಕ್ತಿಯೊಬ್ಬನು ಥಿಯೇಟರ್  ಹೊರ ಭಾಗದಲ್ಲಿ ದೈವ ಬಂದಂತೆ ವರ್ತಿಸಿದ್ದ ವಿಡಿಯೋ ವೈರಲ್ ಆಗಿತ್ತು. ‘ರಿಷಬ್ ಅವರಲ್ಲಿ ದೇವರನ್ನು ನೋಡಿದೆ’ ಎಂದೆಲ್ಲ ಆತ ಹೇಳಿಕೊಂಡಿದ್ದ.

ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಈ ವಿಡಿಯೋ ವ್ಯಾಪಕ ಟೀಕೆ ವಿರೋಧಕ್ಕೆ ಗುರಿಯಾಗಿತ್ತು. ಈ ರೀತಿ ನಡೆದುಕೊಳ್ಳುವುದು ದೈವಕ್ಕೆ ಮಾಡುವ ಅವಮಾನ ಎಂಬ ಮಾತುಗಳು ಕೂಡ ಕೇಳಿ ಬಂದಿದ್ದವು. ತಕ್ಷಣವೇ ಎಚ್ಚೆತ್ತುಕೊಂಡ ವ್ಯಕ್ತಿ, ಕ್ಷಮೆ ಕೇಳಿದ್ದಾನೆ.

Related Articles

Back to top button
error: Content is protected !!