ಇತರೆ

ಕಾರು ಅಪಘಾತ: ಯುವಕ ಸ್ಥಳದಲ್ಲಿಯೇ ಸಾವು

Views: 76

ಕನ್ನಡ ಕರಾವಳಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಕತ್ತೂರು – ಮರಗೋಡು ರಸ್ತೆಯ ಬಕ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಮರಗೋಡು ನಿವಾಸಿಯಾದ ಬಿದ್ರುಪಣೆ ಸೋಮಣ್ಣ ಅವರ ಪುತ್ರ ಪ್ರವೀಣ್‌ (35) ಮೃತಪಟ್ಟ ದುರ್ದೈವಿ.

ಶುಕ್ರವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಪ್ರವೀಣ್ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಬಕ್ಕ ಬಳಿ ವಾಹನವು ಅಪಘಾತಕ್ಕೀಡಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಜಖಂಗೊಂಡಿದ್ದು, ಚಾಲಕ ಪ್ರವೀಣ್ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!