ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Views: 118
ಕನ್ನಡ ಕರಾವಳಿ ಸುದ್ದಿ”ಮನಸ್ಸನ್ನು ಪ್ರಶಾಂತವಾಗಿಡಲು ಮತ್ತು ಮನಸ್ಸಿನ ಚಂಚಲತೆಯನ್ನು ದೂರ ಮಾಡಲು ಯೋಗ ಸಹಾಯಕ. ದೇಹದ ಪ್ರತಿ ಅಂಗಾಂಗವು ಸಧೃಢವಾಗಿ ಆರೋಗ್ಯಯುತವಾಗಿರಲು ಯೋಗವೊಂದೇ ಪರಿಹಾರ, ಆದ್ದರಿಂದ ಎಲ್ಲರೂ ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು” ಎಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಮಾಹಿತಿ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೋಟೇಶ್ವರದ ಓಮ್ ಯೋಗ ವಿದ್ಯಾಮಂದಿರದ ಕೇಂದ್ರ ಸರಕಾರದ ಆಯುಷ್ ಘಟಕದ ತರಬೇತುದಾರರಾದ ಶ್ರೀಮತಿ ಗೀತಾ ಎಸ್. ಇವರು ಅಭಿಪ್ರಾಯ ಪಟ್ಟರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಆರೋಗ್ಯವಂತ ಭಾರತ ನಿರ್ಮಿಸಲು ಯೋಗ ದಿನಾಚರಣೆಯ ಆಶಯ ಮತ್ತು ಚಟುವಟಿಕೆಗಳು ಸ್ಪೂರ್ತಿದಾಯಕ ಎಂದು ತಿಳಿಸಿದರು.
ಯೋಗ ದಿನಾಚರಣೆಯ ಅಂಗವಾಗಿ ವೀಡಿಯೋ ಪ್ರದರ್ಶಿಸಲಾಯಿತು. ಉತ್ತಮ ವೀಡಿಯೋ ತುಣುಕುಗಳನ್ನು ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಲಾಯಿತು. ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಯೋಗಪಟುಗಳಾದ ಸಂಜನಾ ಮತ್ತು ಅನಿರುದ್ಧ ಇವರು ಯೋಗಾಸನದ ಭಂಗಿಗಳನ್ನು ಪ್ರದರ್ಶಿಸಿದರು.
ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಸ್ವಾಗತಿಸಿದರು. ಕಂಪ್ಯೂಟರ್ ವಿಭಾಗದ ಉಪನ್ಯಾಸಕರಾದ ಅಭಿಜಿತ್ ರವರು ಧನ್ಯವಾದ ಸಲ್ಲಿಸಿದರು. ಸಂಸ್ಕ್ರತ ವಿಭಾಗದ ಮುಖ್ಯಸ್ಥರಾದ ರವಿ ಉಪಾಧ್ಯರವರು ಕಾರ್ಯಕ್ರಮ ನಿರೂಪಿಸಿದರು.