ಶಿಕ್ಷಣ

ಕುಂದಾಪುರ ಆರ್ .ಎನ್.ಶೆಟ್ಟಿ ಪ.ಪೂ ಕಾಲೇಜು:ಪ್ರತಿಭಾ ಕಾರಂಜಿಯಲ್ಲಿ ಶ್ರೀಮಂಜುನಾಥ್ ಚಿತ್ರಕಲೆಯಲ್ಲಿ ಪ್ರಥಮ

Views: 21

ಕನ್ನಡ ಕರಾವಳಿ ಸುದ್ದಿ: ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲೆ ಸ್ಪರ್ಧೆಯಲ್ಲಿ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಶ್ರೀಮಂಜುನಾಥ್ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಚಿತ್ರಕಲಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿ ಶ್ರೀಮಂಜುನಾಥ್ ಗೆ ಕಾಲೇಜಿನ‌ ಸಂಚಾಲಕರಾದ ಶ್ರೀ ಬಿ.ಎಮ್ ಸುಕುಮಾರ ಶೆಟ್ಟಿಯವರು, ಆಡಳಿತ ಮಂಡಳಿ‌ ಕುಂದಾಪುರ ಎಜುಕೇಶನ್ ಸೊಸೈಟಿಯ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯವರು ಅಭಿನಂದನೆ‌ ಸಲ್ಲಿಸಿರುತ್ತಾರೆ.

Related Articles

Back to top button