ಸಾಮಾಜಿಕ
ಕುಂದಾಪುರ: ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷರಾಗಿ ನಾಗರಾಜ್ ಕಾಮಧೇನು,ಉಪಾಧ್ಯಕ್ಷರಾಗಿ ಸತೀಶ್ ನರಸಿಂಹ ಶೇರಿಗಾರ್

Views: 58
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ನಾಗರಾಜ್ ಕಾಮಧೇನು,ಉಪಾಧ್ಯಕ್ಷರಾಗಿ ಸತೀಶ್ ನರಸಿಂಹ ಶೇರಿಗಾರ್ ಆಯ್ಕೆಯಾಗಿದ್ದಾರೆ.
ಸಹಕಾರ ಇಲಾಖೆಯ ಉಪ ನಿಬಂಧಕಿ ಸುಕನ್ಯಾ ಆಯ್ಕೆ ಪ್ರಕ್ರಿಯೆಯನ್ನು ನಿರ್ವಹಿಸಿದರು. ಆಡಳಿತ ಮಂಡಳಿಯ ನಿರ್ದೇಶಕರುಗಳಾಗಿ ಅಜೇಯ ಹವಾಲ್ದಾರ್, ಕೆ.ಅಶೋಕ್ ಬೆಟ್ಟಿನ್, ಕೃಷ್ಣಯ್ಯ ಪಿ. ಮದ್ದೋಡಿ, ಎಂ.ಜಿ. ರಾಜೇಶ್, ಬಿ. ಶ್ರೀಧರ್ ಬೇಲಿಮನೆ, ಶ್ರೀಧರ್ ಪಿ.ಎಸ್., ಕೆ. ಸೂರ್ಯಕಾಂತ್, ರಾಧಾಕೃಷ್ಣ ನಾಯಕ್, ರಶ್ಮಿರಾಜ್ ಮತ್ತು ಶಾರದಾ ವಿಜಯ ಕುಮಾರ್ ಆಯ್ಕೆಯಾಗಿದ್ದರು.
ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ರಾಘವೇಂದ್ರ ಉಪಸ್ಥಿತರಿದ್ದರು.